Featured

ಕುಂದಾಪುರ : ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿ , ಪ್ರಮೋದ್ ಮುತಾಲಿಕ್ ಗೆ ಕಾರ್ಕಳ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ : ಕುಯಿಲಾಡಿ ಸುರೇಶ್ ನಾಯಕ್ – Vishwanews24

ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ ವಿರುದ್ದ ಶಿಸ್ತು ಕ್ರಮ..

ಟಿಕೆಟ್ ಅಕಾಂಕ್ಷಿಗಳಿಂದ, ಅನಗತ್ಯ ಗೊಂದಲ ಸೃಷ್ಟಿ ಬೇಡ..

ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ

ಕುಂದಾಪುರ: ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ ವಿರುದ್ದ ಪಕ್ಷ ಶಿಸ್ತು ಕ್ರಮಕೈಗೊಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ಕುಂದಾಪುರದಲ್ಲಿ ಮಾತನಾಡಿದ ಅವರು ಈಗಾಗಲೇ ಕೆಲವರ ಅನಧಿಕೃತ ಸಭೆಗಳನ್ನು ನಡೆಸಿ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ಪ್ರಮೋದ್ ಮುತಾಲಿಕ್ ಕಾರ್ಕಳದಲ್ಲಿ ಚುನಾವಣೆ ಸ್ಪರ್ಧೆಗೆ ಪ್ರತಿಕ್ರಿಯಿಸದ ಅವರು ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶದಲ್ಲಿ ಮುತಾಲಿಕ್ ಗೆ ಉತ್ತರ ಕೊಡುತ್ತಾರೆ. ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ; ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago