ಕುಂದಾಪುರ: ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ ವಿರುದ್ದ ಪಕ್ಷ ಶಿಸ್ತು ಕ್ರಮಕೈಗೊಳ್ಳಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ಕುಂದಾಪುರದಲ್ಲಿ ಮಾತನಾಡಿದ ಅವರು ಈಗಾಗಲೇ ಕೆಲವರ ಅನಧಿಕೃತ ಸಭೆಗಳನ್ನು ನಡೆಸಿ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಪ್ರಮೋದ್ ಮುತಾಲಿಕ್ ಕಾರ್ಕಳದಲ್ಲಿ ಚುನಾವಣೆ ಸ್ಪರ್ಧೆಗೆ ಪ್ರತಿಕ್ರಿಯಿಸದ ಅವರು ಕಾರ್ಕಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಫಲಿತಾಂಶದಲ್ಲಿ ಮುತಾಲಿಕ್ ಗೆ ಉತ್ತರ ಕೊಡುತ್ತಾರೆ. ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿಯಾಗಿದ್ದು, ಸಂಘಟನೆ ಹಾಗೂ ಅಭಿವೃದ್ಧಿಯಲ್ಲಿ ಕಾರ್ಕಳವನ್ನು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಇರಿಸಿದ್ದಾರೆ. ಮುತಾಲಿಕ್ ಅವರ ಬಗ್ಗೆ ಗೌರವ ಇದೆ. ಇದು ಖಂಡಿತ ಅವರ ತೀರ್ಮಾನವಲ್ಲ; ಕೆಲ ವಿಘ್ನ ಸಂತೋಷಿಗಳು, ಗೊಂದಲ ಸೃಷ್ಟಿಸಲು ಅವರನ್ನು ಅಭ್ಯರ್ಥಿಯಾಗಿ ಬಿಂಬಿಸಲು ಹೊರಟಿದ್ದಾರೆ ಎಂದರು.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…