ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಸಲುವಾಗಿ ಬಿಟ್ಟಿದ್ದ ಮಾರಣಬಲೆ ತರಲು ಸಮುದ್ರಕ್ಕಿಳಿದ ಮೀನುಗಾರ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಮಲ್ಪೆ ಕರಾವಳಿ ಕಾವಲು ಪೊಲೀಸ್ ವ್ಯಾಪ್ತಿಯ ಕೋಟ ಸಮೀಪದ ಪಾರಂಪಳ್ಳಿ ಎಂಬಲ್ಲಿ ನಡೆದಿದೆ.
ಮೃತರನ್ನು ಪಾರಂಪಳ್ಳಿ ನಿವಾಸಿ ಭಾಸ್ಕರ ಪೂಜಾರಿ (55) ಎಂದು ಗುರುತಿಸಲಾಗಿದೆ.
ಭಾಸ್ಕರ ಪೂಜಾರಿ ಪಾರಂಪಳ್ಳಿಯ ಬಳಿ ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆಯನ್ನು ಮೇಲೆತ್ತಲು ಸಮುದ್ರಕ್ಕೆ ಇಳಿದಾಗ ಅಲೆಗೆ ಹೊಡೆತಕ್ಕೆ ಸಿಲುಕಿ ಮುಳುಗಿದ್ದಾರೆ. ತಕ್ಷಣ ನಿಯೋಜಿತರಾಗಿದ್ದ ಮಲ್ಪೆ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯ ಕೆ.ಎನ್.ಡಿ. (ಕರಾವಳಿ ನಿಯಂತ್ರಣ ದಳ) ಸಿಬ್ಬಂದಿ ಸತೀಶ್ ಮತ್ತು ಸುದರ್ಶನ್ ಎಸ್. ಕುಂದರ್ ಸಮುದ್ರಕ್ಕೆ ಹಾರಿ ಅವರನ್ನು ದಡಕ್ಕೆ ತಂದು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಭಾಸ್ಕರ್ ಪೂಜಾರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…