ಕುಂದಾಪುರ:ರಾಜ್ಯದ ಯಾವುದೇ ಅರ್ಹ ಬಡವರಿಗೆ ಅನ್ಯಾಯವಾಗಲು ರಾಜ್ಯ ಸರ್ಕಾರ ಬಿಡುವುದಿಲ್ಲ. ಒಂದೊಮ್ಮೆ ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ಬೆಳಿಗ್ಗೆ ಮುರ್ಡೇಶ್ವರಕ್ಕೆ ಸಮಾವೇಶಕ್ಕೆ ತೆರಳುವ ಮುನ್ನ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪತ್ನಿ ಸಮೇತ ಪೂಜೆ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.
ದೇಶದ ವಿಧಾನಸಭೆಗಳ ಚುನಾವಣೆ ಬಗ್ಗೆ ಸಮೀಕ್ಷೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿಯೂ ಸಮೀಕ್ಷೆ ನಡೆದಿತ್ತು. ಆದರೆ ಅದು ತಲೆಕೆಳಗಾಗಿದೆ. ಹಾಗಾಗಿ ಚುನಾವಣಾ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ. ಎಲ್ಲೆಡೆ ಐಎನ್ಡಿಐಎ ಜಯಭೇರಿ ಬಾರಿಸುತ್ತದೆ ಎಂದರು.
ರಾಜ್ಯದ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಯತ್ನವನ್ನು ನಾವು ಪ್ರಾಮಾಣಿಕವಾಗಿ ಮಾಡಿದ್ದೇವೆ. ಉಳಿದದ್ದು ದೇವರಿಗೆ ಬಿಟ್ಟಿದ್ದೇವೆ ಎಂದರು. ಕೊಲ್ಲೂರು ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ ಗೆ ಮಣೆ ಹಾಕಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಚುನಾವಣಾ ಸಂದರ್ಭದಲ್ಲಿ ನೀಡಿದ ಮಾತಿನಂತೆ ನಡೆದುಕೊಂಡಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.
ಈ ಸಂದರ್ಭ ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಸ್ಪಿ ಕೆ ಅರುಣ್ ಕುಮಾರ್, ಮಾಜೀ ಶಾಸಕ ಕೆ ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಮಾಜೀ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜು ಪೂಜಾರಿ, ಮುಖಂಡರುಗಳಾದ ಉದ್ಯಮಿ ರಾಜೇಶ್ ಕಾರಂತ್, ಸಹನಾ ಸುರೇಂದ್ರ ಶೆಟ್ಟಿ ಮೊದಲಾದವರು ಇದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…