ಉಡುಪಿ

ಕುಂದಾಪುರ: ಸಾವಿರಾರು ಜನರೊಂದಿಗೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆ

ಅವರು ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡುತ್ತಾ, ಚುನಾವಣಾ ಪೂರ್ವದಲ್ಲಿ ನಡೆದಂತಹ ಎಲ್ಲಾ ಸಮೀಕ್ಷೆಗಳು ಬಿಜೆಪಿ ವಿರುದ್ಧವಾಗಿದೆ. ಆದರೂ ರಾಜ್ಯದಲ್ಲಿ ನಾವೇ ಅಧಿಕಾರಿ ಹಿಡಿಯುತ್ತೇವೆ ಎಂಬ ಭ್ರಮಾಲೋಕದಲ್ಲಿ ಬಿಜೆಪಿ ನಾಯಕರಿದ್ದಾರೆ ಎಂದು ಐವನ್ ಹೇಳಿದರು.

ನಾಲ್ಕು ಬಾರಿ ಕುಂದಾಪುರದಿಂದ ಆಯ್ಕೆಯಾದ ಶಾಸಕರು ತನ್ನ ಜವಾಬ್ದಾರಿ ನಿಭಾಯಿಸಲು ವಿಫಲರಾಗಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು ತಮ್ಮ-ತಮ್ಮ ಕ್ಷೇತ್ರಕ್ಕೆ ಕಳೆದ ಐದು ವರ್ಷಗಳಲ್ಲಿ ಕೋಟ್ಯಾಂತರ ರೂ. ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ. 

ಆದರೆ ಕುಂದಾಪುರ ಶಾಸಕರು ಮನೆಯಲ್ಲಿ ಕೂತು ಕಾಲಹರಣ ಮಾಡಿದ್ದು ಬಿಟ್ಟರೆ ಬೇರೇನು ಅಭಿವೃದ್ಧಿ ಮಾಡಿಲ್ಲ ಎಂದು ಅವರು ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ವಿರುದ್ದ ಆರೋಪ ಸುರಿಮಳೆ ಸುರಿಸಿದರು.

ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಮಾತನಾಡಿ, ಕುಂದಾಪುರ ಕ್ಷೇತ್ರದ ಅಭಿವೃದ್ಧಿ ನನ್ನ ಕನಸಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಈ ಬಾರಿ ಮತದಾರರು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ್ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಎಐಸಿಸಿ ಸದಸ್ಯ, ಯುವ ನಾಯಕ ಅಮೃತ್ ಶೆಣೈ, ನಗರಾಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ಚುನಾವಣೆ ಉಸ್ತುವಾರಿ ಜಿ.ಎ.ಬಾವಾ, ಕುಂದಾಪುರ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮೀನುಗಾರಿಕಾ ನಿಗಮ ಮಾಜಿ ಅಧ್ಯಕ್ಷ ಹಿರಿಯಣ್ಣ, ಮಂಜುನಾಥ ಭಂಡಾರಿ, ರೋಶನಿ ಒಲಿವೇರಾ, ಮಾಜಿ ಪುರಸಭಾ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮಾಜಿ ಜಿಪಂ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ವಿನೋದ್ ಕ್ರಾಸ್ತಾ, ನಾರಾಯಣ ಆಚಾರ್, ಪುರಸಭೆ ಸದಸ್ಯರು, ಜಿ.ಪಂ, ತಾ.ಪಂ ಸದಸ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.

ಸಭೆಯ ಬಳಿಕ ರಾಕೇಶ್ ಮಲ್ಲಿ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ಸಹಾಯಕ ಆಯುಕ್ತ, ಚುನಾವಣಾಧಿಕಾರಿ ಭೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago