ಕುಂದಾಪುರ: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಜನರಿಗೆ ಅನಗತ್ಯ ಆರ್ಥಿಕ ಹೊರೆಯನ್ನು ಹೊರೆಸುವ ಯೋಜನೆ ಇದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದ್ದಾರೆ .
ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಹೆಸರಿನಲ್ಲಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸಲು ಸಬ್ಸಿಡಿ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಕೇಂದ್ರ ಸರ್ಕಾರ ಜಾಹಿರಾತುಗಳನ್ನು ನೀಡುತ್ತಿದ್ದು ಇದೊಂದು ಅನುಪಯುಕ್ತ ಹಾಗೂ ಜನಸಾಮಾನ್ಯರನ್ನು ಆರ್ಥಿಕ ಹೊರೆಯನ್ನು ಹೇರುವ ಯೋಜನೆಯಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯ ಮೂಲಕ ಇನ್ನೂರು ಯೂನಿಟ್ ತನಕ ಉಚಿತ ವಿದ್ಯುತ್ ನೀಡುತ್ತಿದ್ದು ರಾಜ್ಯದ ಸುಮಾರು 80% ಕ್ಕಿಂತ ಹೆಚ್ಚಿನ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಹೆಸರಿಗೆ ಮಾತ್ರ ಉಚಿತ ಆದರೆ ಸಬ್ಸಿಡಿ ಹೆಸರಿನಲ್ಲಿ ಫಲಾನುಭವಿಗಳಿಗೆ ಸಾಲ ನೀಡಿ ನಂತರ ಫಲಾನುಭವಿಗಳಿಗೆ ಅನಗತ್ಯ ಸಾಲದ ಸುಳಿಯಲ್ಲಿ ಸಿಲುಕಿಸುವ ಯೋಜನೆ ಇದಾಗಿದೆ. ಇದರೊಂದಿಗೆ ಸೋಲಾರ್ ದಾರಿದೀಪ ಇತ್ಯಾದಿ ಸೋಲಾರ್ ಉಪಕರಣಗಳು ಈಗಾಗಲೇ ಸರಿಯಾದ ನಿರ್ವಹಣೆ ಇಲ್ಲದೆ ಯೋಜನೆಗಳು ನಿರುಪಯುಕ್ತವಾಗಿರುವ ಕಾಲಘಟ್ಟದಲ್ಲಿ ಸೂರ್ಯ ಘರ್ ಸೌರ ವಿದ್ಯುತ್ ಯೋಜನೆ ಕೂಡ ಜನರಿಗೆ ಅನಗತ್ಯ ಆರ್ಥಿಕ ಹೊರೆ ನೀಡುವ ಯೋಜನೆಯಾಗಿದ್ದು ಪಂಚ ಗ್ಯಾರಂಟಿಗಳ ಮೂಲಕ ನೆಮ್ಮದಿಯ ಬದುಕನ್ನು ಕಾಣುತ್ತಿರುವ ಕರ್ನಾಟಕ ರಾಜ್ಯದಲ್ಲಿ ಅನಗತ್ಯ ಆರ್ಥಿಕ ಹೊರೆ ನೀಡುವುದು ಜನವಿರೋಧಿ ಕ್ರಮವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿರುತ್ತಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…