ಕುಂದಾಪುರ: ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಎಂಬುವರ ಹಿರಿಯ ಪುತ್ರ ವಾಸುದೇವ ದೇವಾಡಿಗ ಯಾನೇ ಮಣಿಕಂಠ (25) ಸಾವನ್ನಪ್ಪಿದ ದುರ್ದೈವಿ.
ವೃತ್ತಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ವಾಸುದೇವ ದೇವಾಡಿಗ ಸುಮಾರು 5 ಎಕ್ರೆ ಜಾಗದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಇನ್ನು ಎರಡು ಮೂರು ದಿನದಲ್ಲಿ ಕಲ್ಲಂಗಡಿ ಕಟಾವಿಗೆ ಸಿದ್ಧತೆ ಮಾಡಿದ್ದರು. ನಾಗೂರಿನಲ್ಲಿ ಫೆಬ್ರುವರಿ, 4 ರಂದು ಮಂಗಳವಾರ ಸಂಜೆ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ತನ್ನ ವಾಹನವನ್ನು ಕಲ್ಲಂಗಡಿ ಹಣ್ಣಿನ ಲೋಡ್ ಮಾಡಲು ಮತ್ತೊಬ್ಬರಿಗೆ ನೀಡಿದ್ದು, ಅವರು ವಾಹನವನ್ನು ಅವರು ರೈಲ್ವೆ ಹಳಿ ಪಶ್ಚಿಮ ದಿಕ್ಕಿನಲ್ಲಿ ನಿಲ್ಲಿಸಿ ಕಲ್ಲಂಗಡಿ ಹಣ್ಣಿನ ಲೋಡ್ ಮಾಡುತ್ತಿದ್ದವರ ಬಳಿ ಮಾತನಾಡಿ ಹಣ ಕೊಟ್ಟು ಬರುತ್ತೇನೆಂದು ರೈಲ್ವೇ ಹಳಿ ದಾಟಿ ಹೋಗಿ ವಾಪಾಸು ಬರುತ್ತಿದ್ದರು.
ಈ ವೇಳೆ ಮಂಗಳೂರು ಕಡೆಯಿಂದ ಮಡಗಾಂವ್ ಕಡೆಗೆ ರೈಲು ಬರುತ್ತಿರುವುದನ್ನು ಕೊನೆಯ ಕ್ಷಣದಲ್ಲಿ ಗಮನಿಸಿದ ವಾಸುದೇವ ತಪ್ಪಿಸಿಕೊಳ್ಳಲು ಯತ್ನಿಸಿ ಹಳಿಯ ಪಕ್ಕಕ್ಕೆ ಸರಿದು ತಿರುಗಿದಾಗ ಮುಖಕ್ಕೆ ರೈಲು ಡಿಕ್ಕಿಯಾಗಿ ತಲೆ ಛಿದ್ರವಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಾಸುದೇವ ಮುತ್ತಯ್ಯ ದೇವಾಡಿಗರ ಐದು ಜನ ಮಕ್ಕಳ ಪೈಕಿ ಹಿರಿಯವನಾಗಿದ್ದಾನೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…