Featured

ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು – vishwanews24

ಕುಂದಾಪುರ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ – ಯುವಕ ಸಾವು

ಕುಂದಾಪುರ: ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಎಂಬುವರ ಹಿರಿಯ ಪುತ್ರ ವಾಸುದೇವ ದೇವಾಡಿಗ ಯಾನೇ ಮಣಿಕಂಠ (25) ಸಾವನ್ನಪ್ಪಿದ ದುರ್ದೈವಿ.

ವೃತ್ತಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ವಾಸುದೇವ ದೇವಾಡಿಗ ಸುಮಾರು 5 ಎಕ್ರೆ ಜಾಗದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಇನ್ನು ಎರಡು ಮೂರು ದಿನದಲ್ಲಿ ಕಲ್ಲಂಗಡಿ ಕಟಾವಿಗೆ ಸಿದ್ಧತೆ ಮಾಡಿದ್ದರು. ನಾಗೂರಿನಲ್ಲಿ ಫೆಬ್ರುವರಿ, 4 ರಂದು ಮಂಗಳವಾರ ಸಂಜೆ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ತನ್ನ ವಾಹನವನ್ನು ಕಲ್ಲಂಗಡಿ ಹಣ್ಣಿನ ಲೋಡ್ ಮಾಡಲು ಮತ್ತೊಬ್ಬರಿಗೆ ನೀಡಿದ್ದು, ಅವರು ವಾಹನವನ್ನು ಅವರು ರೈಲ್ವೆ ಹಳಿ ಪಶ್ಚಿಮ ದಿಕ್ಕಿನಲ್ಲಿ ನಿಲ್ಲಿಸಿ ಕಲ್ಲಂಗಡಿ ಹಣ್ಣಿನ ಲೋಡ್ ಮಾಡುತ್ತಿದ್ದವರ ಬಳಿ ಮಾತನಾಡಿ ಹಣ ಕೊಟ್ಟು ಬರುತ್ತೇನೆಂದು ರೈಲ್ವೇ ಹಳಿ ದಾಟಿ ಹೋಗಿ ವಾಪಾಸು ಬರುತ್ತಿದ್ದರು.

ಈ ವೇಳೆ ಮಂಗಳೂರು ಕಡೆಯಿಂದ ಮಡಗಾಂವ್ ಕಡೆಗೆ ರೈಲು ಬರುತ್ತಿರುವುದನ್ನು ಕೊನೆಯ ಕ್ಷಣದಲ್ಲಿ ಗಮನಿಸಿದ ವಾಸುದೇವ ತಪ್ಪಿಸಿಕೊಳ್ಳಲು ಯತ್ನಿಸಿ ಹಳಿಯ ಪಕ್ಕಕ್ಕೆ ಸರಿದು ತಿರುಗಿದಾಗ ಮುಖಕ್ಕೆ ರೈಲು ಡಿಕ್ಕಿಯಾಗಿ ತಲೆ ಛಿದ್ರವಾಗಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಾಸುದೇವ ಮುತ್ತಯ್ಯ ದೇವಾಡಿಗರ ಐದು ಜನ ಮಕ್ಕಳ ಪೈಕಿ ಹಿರಿಯವನಾಗಿದ್ದಾನೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…

7 seconds ago

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ…

7 minutes ago

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ…

37 minutes ago

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

53 minutes ago

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…

59 minutes ago

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

1 hour ago