ಕುಂದಾಪುರ: ಕಳೆದ ನಲವತ್ತು ವರ್ಷಗಳಿಂದ ಹಾಲಾಡಿ ಶ್ರೀನಿವಾಸ ಶೆಟ್ಟರು ಮತ್ತು ನಾನು ಸ್ನೇಹಿತರು. ಈ ನಲವತ್ತು ವರ್ಷಗಳಲ್ಲಿ ಸಣ್ಣ ಅಸಹನೆಯೂ ನಮ್ಮಿಬ್ಬರಲ್ಲಿ ಬಂದಿಲ್ಲ. ಚುನಾವಣೆಯಿಂದ ಹಿಂದೆ ಸರಿಯುವ ಅವರ ಈ ನಿರ್ಧಾರವನ್ನು ನಾನು ನಿರೀಕ್ಷೆಯೇ ಮಾಡಿರಲಿಲ್ಲ ಎಂದು ಶಾಸಕ ಹಾಲಾಡಿಯವರ ಆಪ್ತ, ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿಯವರು ಹೇಳಿದರು.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಹಾಲಾಡಿಯವರು ಸ್ಪರ್ಧೆಯಿಂದ ಹಿಂದೆ ಸರಿದಿರುವ ಬಗ್ಗೆ ನಮ್ಮೊಳಗೆ ಯಾವುದೇ ಗೊಂದಲಗಳಿಲ್ಲ. ಅವರು ಭಾರತೀಯ ಜನತಾ ಪಾರ್ಟಿಯಲ್ಲಿಯೇ ಇದ್ದಾರೆ. ಭಾಜಪಕ್ಕಾಗಿಯೇ ಕೆಲಸ ಮಾಡುತ್ತಾರೆ. ಚುನಾವಣೆಗೆ ಸ್ಪರ್ಧೆ ಮಾತ್ರ ಇಲ್ಲ ಎಂದರು.
ಹಾಲಾಡಿಯವರು ಇದ್ದ ಚುನಾವಣೆಯೇ ಬೇರೆ. ಅವರ ಸ್ಪರ್ಧೆ ಇಲ್ಲದೇ ಇರುವ ಚುನಾವಣೆಯೇ ಬೇರೆ. ಎರಡೂ ವಿಭಿನ್ನ. ಅವರಿರುವಾಗ ನಮಗೆ ಮತ್ತು ಕಾರ್ಯಕರ್ತರಿಗೆ ಕೆಲಸ ಮಾಡುವ ಹುಮ್ಮಸ್ಸೇ ಬೇರೆ. ಇದೀಗ ನಮಗೆ ಹೊಸ ಸವಾಲು. ಹಾಲಾಡಿಯವರು ಸ್ಪರ್ಧೆಯಿಂದ ಹಿಂದೆ ಸರಿದಾಗ ನನಗೆ ನಿಜವಾಗಿಯೂ ನೋವಾಯಿತು. ಈ ಬಾರಿಯೂ ಅವರೇ ಸ್ಪರ್ಧಿಸುತ್ತಾರೆಂದು ನಾವು ತಯಾರಿ ಕೂಡ ಮಾಡಿಕೊಂಡಿದ್ದೆವು. ಹಾಲಾಡಿಯವರ ಐದು ಚುನಾವಣೆಯಲ್ಲಿ ನಾನು ಜೊತೆಗೆ ಇದ್ದವನು. ಐದು ಚುನಾವಣೆಯಲ್ಲಿ ಅವರ ಪರ ಕೆಲಸ ಮಾಡುವುದು ನಮಗೆ ಅತ್ಯಂತ ಸುಲಭವಾಗಿತ್ತು. ಐದು ವರ್ಷ ಅವರು ಜನರ ಕೆಲಸ ಮಾಡುತ್ತಾರೆ. ನಾವು ಅವರಿಗಾಗಿ ಚುನಾವಣೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.
ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಗೆ ಇಬ್ಬರೂ ಜೊತೆಯಾಗಿಯೇ ಹೋಗಿದ್ದೇವೆ. ಹನ್ನೊಂದು ಗಂಟೆಯ ರಾತ್ರಿಯವರೆಗೂ ಜೊತೆಯಾಗಿಯೇ ಇದ್ದೆವು. ಚುನಾವಣೆಯ ನಿರ್ಧಾರದ ಕುರಿತು ಏನು ಹೇಳಿರಲಿಲ್ಲ. ಬೆಳಿಗ್ಗೆ ಬನ್ನಿ ಎಂದು ತಿಳಿಸಿದ್ದರು. ಈ ನಿರ್ಧಾರದ ಬಗ್ಗೆ ಆಗಾಗೆ ನಮ್ಮೊಳಗೆ ಚರ್ಚೆಗಳು ನಡೆಯುತ್ತಿತು. ನಾವೆಲ್ಲರೂ ಈ ಬಾರಿ ನೀವೇ ನಿಲ್ಲಬೇಕು ಎಂದು ಒತ್ತಾಯಿಸಿದ್ದೆವು. ನನ್ನ ಸ್ಪರ್ಧೆ ಪಕ್ಷದ ತೀರ್ಮಾನಕ್ಕೆ ಬಿಟ್ಟಿದ್ದು. ಪಕ್ಷ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರೆ ತೆಗೆದುಕೊಳ್ಳುವೆ. ಕಾರ್ಯಕರ್ತನಾಗಿ ಕೆಲಸ ಮಾಡಲಿ ಎಂದರೂ ಮಾಡುವೆ ಎಂದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…