ಕುಂದಾಪುರ : ಕರಾವಳಿ ಭಾಗದ ಪ್ರಭಾವಿ ನಾಯಕ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಶನಿವಾರ ಬೆಳಗ್ಗೆ ಬೈಂದೂರು ಬಿಜೆಪಿ ಅಭ್ಯರ್ಥಿ, ಯುವ ನಾಯಕ ಗುರುರಾಜ್ ಗಂಟಿಹೊಳೆ ಅವರು ಹಾಲಾಡಿಯವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದು, ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ರು, ಪಕ್ಷದ ಹಿರಿಯ ನಾಯಕರು, ಪ್ರಮುಖರು ನನಗೆ ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದು ನನ್ನ ಕರ್ತವ್ಯವೂ ಹೌದು. ಯುವ ನಾಯಕ ಗುರುರಾಜ್ ಅವರಿಗೆ ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ ಎಂದರು.
ಗುರುರಾಜ್ ಗಂಟಿಹೊಳೆ ಮಾತನಾಡಿ, ಹಾಲಾಡಿ ಶ್ರೀನಿವಾಸ ಶೆಟ್ಟರು ನಮಗೆಲ್ಲ ಆದರ್ಶಪ್ರಾಯರು. ಅವರ ಆರ್ಶಿವಾದವನ್ನು ಪಡೆದಿದ್ದೇನೆ. ಅವರ ಬೆಂಬಲ, ಸಹಕಾರವಿಂದು ಸಿಕ್ಕಿದೆ. ಈಗ ನನಗೆ ಧೈರ್ಯ ಬಂದಿದೆ. ಅವರ ಸಾಮಾಜಿಕ ಕೈಂಕರ್ಯ ನಮಗೆಲ್ಲ ಮಾದರಿ ಎಂದು ಹೇಳಿದಲ್ಲದೆ ಬೈಂದೂರು ಹಾಲಿ ಶಾಸಕ ಸುಕುಮಾರ್ ಶೆಟ್ಟರನ್ನು ಭೇಟಿಯಾಗಿದ್ದು, ಅವರು ಸಹ ನಾನಿದ್ದೇನೆ, ಹೆದರಬೇಡ, ಧೈರ್ಯದಿಂದ ಇರು ಎನ್ನುವ ಮಾತನ್ನು ಕೊಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…