Featured

ಕುಂದಾಪುರ : ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಗೃಹ ನಿರ್ಮಿಸಿಕೊಟ್ಟ ಗೋವಿಂದ ಬಾಬು ಪೂಜಾರಿ – Vishwanews24

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಗೃಹ ನಿರ್ಮಿಸಿಕೊಟ್ಟ ಗೋವಿಂದ ಬಾಬು ಪೂಜಾರಿ

ಒಟ್ಟು ಇದುವರೆಗೆ ಬಡವರಿಗೆ ಹನ್ನೊಂದು ಮನೆ ನಿರ್ಮಿಸಿಕೊಟ್ಟ ಪುಣ್ಯಾತ್ಮ

ಕುಂದಾಪುರ: ಜ್ಞಾನಕ್ಕೆ ಜಾತಿ ಅಡ್ಡಿ ಬರುವುದಿಲ್ಲ, ನಮ್ಮಲ್ಲಿರುವ ಜಾತಿ ಭೇದ, ಮೇಲು ಕೀಳುವ ಎನ್ನುವ ಭಾವ ಮತಾಂತರಕ್ಕೆ ಕಾರಣವಾಗಿದೆ. ನಮ್ಮ ತೊಡಕನ್ನು ಸರಿ ಮಾಡಿಕೊಂಡರೆ ಮಾತ್ರ ಸಮಾಜ ಸುಧಾರಿಸಲಿದೆ. ಹಿಂದೂ ಎಂದರೆ ಎಲ್ಲರೂ ಒಂದಾಗುವುದು ಎನ್ನುವುದು ಅರ್ಥ. ದೇವರ ಪೂಜೆ ಮಾಡುವುದು ದೊಡ್ಡದಲ್ಲ. ದೇವರಂತೆ ಬದುಕಬೇಕು ಎಂದು ವಿನಯ್‌ ಗೂರುಜಿ ತಿಳಿಸಿದರು.

ಅಪಘಾತದಿಂದ ತನ್ನ ಕಾಲಿನ ಬಲ ಕಳೆದುಕೊಂಡಿರುವ ಮರವಂತೆ ಗ್ರಾಮದ ನಿವಾಸಿ, ಹಿಂದೂ ಸಂಘಟನೆ ಕಾರ್ಯಕರ್ತ ರಾಜುಮರವಂತೆ ಅವರಿಗೆ ಜ.5ರಂದು ಶ್ರೀ ವರಲಕ್ಷ್ಮೀ ಟ್ರಸ್ಟ್ ವತಿಯಿಂದ ನಿರ್ಮಿಸಿದ 11ನೇ ಮನೆಯ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.

ವರಲಕ್ಷ್ಮೀಚಾರಿಟೆಬಲ್ ಮ್ಯಾನೇಜಿಂಗ್ ಟ್ರಸ್ಟಿ ಡಾ| ಗೋವಿಂದ ಬಾಬು ಪೂಜಾರಿ ಮಾತನಾಡಿ, ಧರ್ಮದ ಬಗ್ಗೆ ಸದಾ ಕಾಲ ದುಡಿಯುವ ಹಿಂದೂ ಸಂಘಟನೆಯ ಕಾರ್ಯಕರ್ತರ ಕುಟುಂಬದ ಸದಸ್ಯರಿಗೆ ಹಿಂದೂ ಸಮಾಜದವರುಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ವಿಹಿಂಪ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ ವೆಲ್ ಮಾತನಾಡಿ ಇನ್ನೊಬ್ಬರ ನೋವಿಗೆ ಸ್ಪಂದಿಸುವುದು ಪುಣ್ಯದ ಕೆಲಸ ಎನ್ನುವುದು ಭಾರತೀಯರಿಗೆ ಹುಟ್ಟಿ ನಿಂದಲೇ ಬಂದಿದೆ. ಜಗತ್ತಿನಲ್ಲೇ ಭರತ ಖಂಡ ಪವಿತ್ರವಾದ ಕ್ಷೇತ್ರವಾಗಿದೆ ಎಂದರು.

ಸ್ವಾಮೀಜಿ ಶ್ರೀ ಅಭಿನವ ಹಾಲಾಶ್ರೀ ಮಾತನಾಡಿ ದಾನ ಮಾಡುವುದು ಮುಖ್ಯವಲ್ಲ ಮಾಡುವ ಉದ್ದೇಶ ದೊಡ್ಡದಿರಬೇಕು. ಧರ್ಮದ ಕಾರ್ಯ ನಿಷ್ಕಲ್ಮಶದಿಂದ ಮಾಡಿದರೆ ಮಾತ್ರ ಸಾರ್ಥಕತೆಯಿಂದ ಕೂಡಿರುತ್ತದೆ. ರಾಷ್ಟ್ರದ ಚಿಂತನೆ, ದೇಶದ ಭವಿಷ್ಯದ ಬಗ್ಗೆ ಕರಾವಳಿಗರ ಧ್ವನಿ ಗಟ್ಟಿಯಾಗಿದೆ ಎಂದರು.

ಚೈತ್ರಾ ಕುಂದಾಪುರ, ಪ್ರಕಾಶ್ ಕುಕ್ಕೆಹಳ್ಳಿ ನಾರಾಯಣ ಶೆಟ್ಟಿ, ಬಾಬು ಪೂಜಾರಿ, ಮಂಜಮ್ಮ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್‌ನ ಬಜರಂಗದಳದ ವತಿಯಿಂದ ಸಮಾಜ ಸೇವಕ ಡಾ| ಗೋವಿಂದ ಬಾಬು ಪೂಜಾರಿ ಅವರನ್ನು ಸಮ್ಮಾನಿಸಲಾಯಿತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago