ಉಡುಪಿ: ಕುಂದಾಪುರ ತಾಲ್ಲೂಕಿನ ವಂಡ್ಸೆ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84) ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ.
ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ನಾರಾಯಣ ಗಾಣಿಗರು ದ್ರೌಪದಿ, ಮಂಡೋದರಿ, ಮೋಹಿನಿ ಸ್ತ್ರೀ ಪಾತ್ರಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದರು.
ಪೆರ್ಡೂರು, ಸಾಲಿಗ್ರಾಮ, ಮಂದಾರ್ತಿ, ಮಾರಣಕಟ್ಟೆ, ಇಡಗುಂಜಿ ಯಕ್ಷಗಾನ ಮೇಳಗಳಲ್ಲಿ ಮೂರು ದಶಕಗಳಿಗೂ ಹೆಚ್ಚುಕಾಲ ದುಡಿದಿದ್ದರು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು.
ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿದ್ದರು. ಇವರು 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದರು.
ಬಜೆಟ್ 2021 : ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ : ಪ್ರಧಾನಿ ಮೋದಿ -Vishwanews24
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…