Featured

ಕುಂದಾಪುರ : ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ -Vishwanews24

ಕುಂದಾಪುರ : ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ -Vishwanews24

ಉಡುಪಿ: ಕುಂದಾಪುರ ತಾಲ್ಲೂಕಿನ ವಂಡ್ಸೆ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84) ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ.

ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ನಾರಾಯಣ ಗಾಣಿಗರು ದ್ರೌಪದಿ, ಮಂಡೋದರಿ, ಮೋಹಿನಿ ಸ್ತ್ರೀ ಪಾತ್ರಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದರು‌.

ಪೆರ್ಡೂರು, ಸಾಲಿಗ್ರಾಮ, ಮಂದಾರ್ತಿ, ಮಾರಣಕಟ್ಟೆ, ಇಡಗುಂಜಿ ಯಕ್ಷಗಾನ ಮೇಳಗಳಲ್ಲಿ ಮೂರು ದಶಕಗಳಿಗೂ ಹೆಚ್ಚುಕಾಲ ದುಡಿದಿದ್ದರು.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು.

ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿದ್ದರು. ಇವರು 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದರು.

ಬಜೆಟ್ 2021 : ಭಾರತದ ಆತ್ಮವಿಶ್ವಾಸವನ್ನು ಜಗತ್ತಿಗೆ ಎತ್ತಿ ತೋರಿಸುತ್ತಿದೆ : ಪ್ರಧಾನಿ ಮೋದಿ -Vishwanews24

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago