ಕುಂದಾಪುರ: ಮುಂಬೈಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಉದ್ಯಮಿಯೋರ್ವರು ಕುಂದಾಪುರ ಹೇರಿಕುದ್ರು ಸೇತುವೆಯ ಮೇಲಿನಿಂದ ಪಂಚಗಂಗಾವಳಿ ಹೊಳೆಗೆ ಹಾರಿದ್ದು, ಇವರಮೃತದೇಹ ಹೆಮ್ಮಾಡಿ ಸಮೀಪದ ಬುಗ್ರಿಕುಡು ಎಂಬಲ್ಲಿ ಸೋಮವಾರಾರ ಮುಂಜಾನೆ ಪತ್ತೆಯಾಗಿದೆ.
ಮೃತರನ್ನು ಸ್ಥಳಿಯ ಚಿಕನ್ಸಾಲ್ ರಸ್ತೆಯ ನಿವಾಸಿ ಕೆ.ಜಿ. ಗಣೇಶ್(೪೯) ಗುರ್ತಿಸಲಾಗಿದೆ. ಭಾನುವಾರ ಸಂಜೆ ಸುಮಾರಿಗೆ ರಿಕ್ಷಾದಲ್ಲಿ ಬಂದ ಅವರು ಸೇತುವೆ ಮೇಲೆ ಇಳಿದಿದ್ದರು. ತನ್ನ ಆಧಾರ್ ಕಾರ್ಡ್ ಮತ್ತು ಪರ್ಸನ್ನು ಸೇತುವೆ ದಂಡೆ ಮೇಲಿರಿಸಿ ಏಕಾಏಕಿ ನದಿಗೆ ಧುಮುಕ್ಕಿದ್ದರು. ಇದನ್ನು ಕಂಡ ಸಾರ್ವಜನಿಕರ್ಯಾರೋ ಬೊಬ್ಬಿರಿದಿದ್ದು, ಕೂಡಲೇ ಸೇರಿದ ಸಾರ್ವಜನಿಕರು ಅವರ ಹುಡುಕಾಟಕ್ಕೆ ತೊಡಗಿದ್ದರು. ಮಾಹಿತಿ ಪಡೆದು ಆಗಮಿಸಿದ ಅಗ್ನಿಶಾಮಕ ದಳದವರೂ ಸಹಾ ಹೊಳೆಯಲ್ಲಿ ಹಲವು ಸುತ್ತಿನ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಇಂದು ಮುಂಜಾನೆ ಶವ ಪತ್ತೆಯಾಗಿದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…