Featured

ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ.

ಹಳ್ನಾಡು ಗ್ರಾಮದ ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಆತ್ಮಹತ್ಯೆ ಮಾಡಿಕೊಂಡಾತ. ಕುಂದಾಪುರದ ಖಾಸಗೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಿಯು ವಿದ್ಯಾಭ್ಯಾಸ ಮಾಡಿದ್ದ ಸುಪ್ರಜ್ ಶೆಟ್ಟಿಗೆ ಮೆಡಿಕಲ್ ಓದುವ ಆಸೆಯಿತ್ತೆನ್ನಲಾಗಿದೆ. ಆದರೆ ಆತನಿಗೆ ಬೆಂಗಳೂರಿನಲ್ಲಿ ಇಂಜಿನಿಯರ್ ಸೀಟ್ ದೊರಕಿತ್ತು. ಇದು ಆತನಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಆತನ ಮನೆಯವರು ಮಗನಿಗೆ ಬುದ್ಧಿವಾದ ಹೇಳಿ ಬೆಂಗಳೂರಿಗೆ ಕಳುಹಿಸಲು ಬಟ್ಟೆಬರೆಗಳನ್ನು ಪ್ಯಾಕ್ ಮಾಡಿದ್ದರೆನ್ನಲಾಗಿದೆ. ಎಲ್ಲವೂ ಸರಿಯಾಗಿದ್ದರೆ ಗುರುವಾರ ಆತ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಬುಧವಾರ ಸಂಜೆ ಹಳ್ನಾಡು ಮನೆಯ ಸಮೀಪದ ಹೊಳೆಯ ಬದಿಯಲ್ಲಿ ತನ್ನ ಚಪ್ಪಲಿ ಮತ್ತು ಮೊಬೈಲ್ ಬಿಟ್ಟಿರುವುದು ಕಂಡು ಬಂದಿದೆ.

ಇದರಿಂದ ಅನುಮಾನಗೊಂಡ ಮನೆಯವರು ಹಾಗೂ ಸ್ಥಳೀಯತು ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಗುರುವಾರ ಮಧ್ಯಾಹ್ನ ಬಾಲಕನ ಮೃತದೇಹ ಅದೇ ಹೊಳೆಯಲ್ಲಿ ಪತ್ತೆಯಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago