Featured

ಕುಂದಾಪುರ: ಹೋಟೆಲ್ ನಲ್ಲಿ ತಂಗಿದ್ದ ವ್ಯಕ್ತಿಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾದ ಸ್ನೇಹಿತ – Vishwanews24

ಕುಂದಾಪುರ: ಹೋಟೆಲ್ ನಲ್ಲಿ ತಂಗಿದ್ದ ವ್ಯಕ್ತಿಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾದ ಸ್ನೇಹಿತ

ಕುಂದಾಪುರ: ಹೋಟೆಲ್ ನಲ್ಲಿ ತಂಗಿದ್ದ ವ್ಯಕ್ತಿಯೋರ್ವರ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಜೊತೆಗಿದ್ದ ಸ್ನೇಹಿತನೇ ಕಳ್ಳತನ ಮಾಡಿರುವ ಕುರಿತಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಜುವೆಲ್ಲರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿರುವ ಮೂಲತಃ ರಾಜಸ್ಥಾನದವರಾದ ಪ್ರಸ್ತುತ ಅತ್ತಾವರ ನಿವಾಸಿ ರಮೇಶ್ ಕುಮಾರ್ (26) ಜೂನ್ 10 ರಂದು 421.380 ಮಿಲಿ ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಜಿ ಗೋಲ್ಡ್ ಎಂಡ್ ಡೈಮೆಂಡ್ ಶಾಫ್ ನಿಂದ ಮಾರಾಟ ಮಾಡಲು ಹೊರಟಿದ್ದರು. ಈ ವೇಳೆ ಮಧ್ಯಾಹ್ನ 12:00 ಗಂಟೆಗೆ ತನ್ನ ಸ್ನೇಹಿತರಾದ ರಾಜಸ್ಥಾನದ ಪಾಲಿ ಜಿಲ್ಲೆಯ ರಾಮ್ ಎಂಬಾತ ಮಂಗಳೂರಿನ ಪಂಪ್ವೇಲ್ ಬಳಿ ಸಿಕ್ಕಿದ್ದು ಇಬ್ಬರೂ ಕೂಡ ಜೊತೆಯಲ್ಲಿ ಬಸ್ಸಿನಲ್ಲಿ ಹೊರಟು ಸಂಜೆ 04:30 ಗಂಟೆಗೆ ಉಪ್ಪುಂದದ ಅಶೋಕ್ ಜ್ಯುವೆಲ್ಲರಿಗೆ ಹೋಗಿ 14 ಗ್ರಾಂ ಚಿನ್ನಾಭರಣ ಮಾರಾಟ ಮಾಡಿ ಅಲ್ಲಿಂದ 14 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ವಾಪಸು ಮಂಗಳೂರಿಗೆ ಹೊರಟಿದ್ದರು.

ಕುಂದಾಪುರ ತಲುಪುವಾಗ ಸಂಜೆ 07:00 ಗಂಟೆ ಆದ್ದರಿಂದ ರಮೇಶ್ ಕುಮಾರ್ ಹಾಗೂ ಅವರ ಸ್ನೇಹಿತ ರಾಮ್ ಕುಂದಾಪುರದ ಖಾಸಗಿ ಹೊಟೇಲ್ ಒಂದರಲ್ಲಿ ರೂಮ್ ನಂಬರ್ 206 ರಲ್ಲಿ ಉಳಿದ್ದುಕೊಂಡಿದ್ದು, ರಾತ್ರಿ ರಮೇಶ್ ಅವರು ಮಲಗುವ ಮಂಚದ ಬಳಿ ಚಿನ್ನಾಭರಣ ಇರುವ ಬ್ಯಾಗ್ ಇಟ್ಟು ಮಲಗಿದ್ದರು.

ಜೂನ್ 11 ರಂದು ಬೆಳಗ್ಗಿನ ಜಾವ 03:00 ಗಂಟೆ ಸುಮಾರಿಗೆ ರಮೇಶ್ ಕುಮಾರ್ ನೀರು ಕುಡಿಯಲು ಎದ್ದಾಗ ಜೊತೆಗಿದ್ದ ರಾಮ್ ರೂಮ್ ನಲ್ಲಿ ಇರಲಿಲ್ಲ. ಸಂಶಯಗೊಂಡು ಚಿನ್ನಾಭರಣದ ಬ್ಯಾಗ್ ಅನ್ನು ಪರಿಶೀಲಿಸಿದಾಗ ಕಳ್ಳತನ ಮಾಡಿರುವುದಾಗಿ ಬೆಳಕಿಗೆ ಬಂದಿದೆ.

ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 22,56,000/- ರೂಪಾಯಿ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago