Featured

ಕುಂದಾಪುರ : 100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ: ಬಿ.ವೈ.ರಾಘವೇಂದ್ರ – Vishwanews24

ಕುಂದಾಪುರ : 100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ..

ಮೃತ ಸನ್ನಿದಿ ಪೋಷಕರಿಗೆ ಸಾಂತ್ವಾನ ಹೇಳಿದ ಸಂಸದ..

ನೊಂದ ಕುಟುಂಬಕ್ಕೆ ವೈಯಕ್ತಿಕ ಧನ ಸಹಾಯ..

ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ 250 ಕಾಲು ಸಂಕಗಳ ಪಟ್ಟಿ ಮಾಡಲಾಗಿದ್ದು, ಆರು ತಿಂಗಳ ಹಿಂದೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಇದೀಗ ಮತ್ತೆ ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವರೊಂದಿಗೆ ಮಾತುಕತೆ ನಡೆಸಿ 100 ಕಾಲುಸಂಕಗಳಿಗೆ 5 ಕೋಟಿ ಅನುದಾನ ಬಿಡುಗಡೆಗೆ ಅನು ಮೋದನೆ ಪಡೆಯಲಾಗಿದೆ.

ಕ್ಷೇತ್ರದಲ್ಲಿ ಕಾಲು ಸಂಕಗಳ ಅಭಿವೃದ್ದಿಗೆ ಇನ್ನೂ 15 ಕೋಟಿ ಅನುದಾನ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

ಕೊಲ್ಲೂರಿನಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅತಿವೃಷ್ಠಿ ಯಿಂದಾಗಿ ಸಾಕಷ್ಟು ಆಸ್ತಿ-ಪಾಸ್ತಿಗಳು ಹಾನಿಯಾಗಿವೆ. ಅತಿವೃಷ್ಠಿಯಿಂದಾಗಿ ಮನೆ, ಆಸ್ತಿ, ಬೆಳೆ ಹಾನಿಯಾದವರಿಗೆ ಮತ್ತು ಮೀನುಗಾರಿಕಾ ಬೋಟು, ಬಲೆಗಳನ್ನು ಕಳೆದುಕೊಂಡವರಿಗೆ ತುರ್ತು ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ, ದೋಣಿ, ಮೀನಿನ ಬಲೆ ಹಾನಿಯಾದವರ ಸಮೀಕ್ಷೆ ನಡೆಸಿ ಕೇಂದ್ರ ಸರಕಾರದ ಪ್ರಕೃತಿ ವಿಕೋಪದ ಅಡಿಯಲ್ಲಿ ಸುಮಾರು 50 ಲಕ್ಷ ರೂ.ಗಿಂತ ಹೆಚ್ಚು ಅನುದಾನವನ್ನು ಬೈಂದೂರು ಕ್ಷೇತ್ರಕ್ಕೆ ಕೊಟ್ಟಿದ್ದೇವೆ ಎಂದರು.

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ ..

ಪಿಪಿಪಿ ಮಾದರಿಯಲ್ಲಿ 228.00 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಮಟ್ಟದ ಸೀ ಪ್ಲೇನ್, ಮರೀನಾ ಹಾಗೂ ಬಹುಪಯೋಗಿ ಬಂದರು ಯೋಜನೆ ಟೆಂಡರ್ ಹಂತದಲ್ಲಿದೆ. 165.00 ಕೋಟಿ ರೂ. ವೆಚ್ಚದ ಸಿದ್ದಾಪುರ ಏತ ನೀರಾವರಿ ಯೋಜನೆ ಅನುಮೋದನೆ ದೊರೆತಿದೆ. 73.71 ಕೋಟಿ ವೆಚ್ಚದಲ್ಲಿ ಸೌಕೂರು ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿದೆ. 35 ಕೋಟಿ ವೆಚ್ಚದಲ್ಲಿ ಸುಬ್ಬರಾಡಿ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದ್ದು ಗೇಟ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಜೊತೆಗೆ ಮಾದರಿ ವಿದ್ಯುತ್ ಗ್ರಾಮ ಯೋಜನೆ ಅಡಿಯಲ್ಲಿ ಕಿರಿಮಂಜೇಶ್ವರ ಗ್ರಾಮದಲ್ಲಿ ಸಮಗ್ರ ವಿದ್ಯುತ್ ನಿರ್ವಹಣೆ ಯೋಜನೆ ಅಂತಿಮ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು

ಮೃತ ಸನ್ನಿದಿ ಪೋಷಕರಿಗೆ ಸಾಂತ್ವಾನ ಹೇಳಿದ ಸಂಸದ

ಕಾಲು ಸಂಕ ದಾಟುತ್ತಿದ್ದಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ನೀರುಪಾಲಾಗಿ ಸಾವನ್ನಪ್ಪಿರುವ ಸನ್ನಿಧಿ (8) ಮನೆಗೆ ಲೋಕಸಭಾ ಸದ್ಯಸ್ಯ ಬಿ. ವೈ. ರಾಘವೇಂದ್ರ ಭೇಟಿ ನೀಡಿದ್ದಾರೆ.

ಸಂಸದರು ವೈಯಕ್ತಿಕವಾಗಿ ನೊಂದ ಕುಟುಂಬಕ್ಕೆ ಧನ ಸಹಾಯ ಮಾಡಿದರು.ಈ ಸಂದರ್ಭ ಬೈಂದೂರು ಕ್ಷೇತ್ರ ಬಿ. ಜೆ.ಪಿ. ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಾಜಿ ಜಿ. ಪಂ. ಸದಸ್ಯರು, ಬಿ. ಜೆ.ಪಿ. ಮುಖಂಡರು ಉಪಸ್ಥಿತರಿದ್ದರು.

ಉಡುಪಿ: ಹೃದಯಾಘಾತದಿಂದ ಪತಿ ಸಾವು ..ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ..

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

20 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

21 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

21 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

22 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

22 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

22 hours ago