ಕುಂದಾಪುರ: ಎಂಟು ಶಾಲಾ ಮಕ್ಕಳ ಸಾವಿಗೆ ಕಾರಣವಾಗಿದ್ದ ಮೊವಾಡಿ ರಸ್ತೆ ಅಪಘಾತ ಪ್ರಕರಣಕ್ಕೆ 10 ವರ್ಷಗಳ ಬಳಿಕ ನ್ಯಾಯಾಲಯ ಅಂತಿಮ ತೀರ್ಪು ನೀಡಿದೆ.
ರಾಷ್ಟ್ರೀಯ ಹೆದ್ದಾರಿ 66ರ ಮೊವಾಡಿ ಡಾನ್ ಬಾಸ್ಕೋ ಶಾಲಾ ಕ್ರಾಸ್ ಬಳಿ 2016ರಲ್ಲಿ ಸಂಭವಿಸಿದ್ದ ಅಪಘಾತ ಪ್ರಕರಣದಲ್ಲಿ ಆರೋಪಿ ಖಾಸಗಿ ಬಸ್ ಚಾಲಕ ಮಂಜುನಾಥ ತ್ರಾಸಿ ಅವರಿಗೆ 1 ವರ್ಷ 17 ದಿನಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 12,500 ರೂ. ದಂಡ ವಿಧಿಸಿ ಕುಂದಾಪುರದ ಮೂರನೇ ಹೆಚ್ಚುವರಿ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಣಿಕಂಠ ಎಂ.ಎಸ್. ಅವರು ಈ ತೀರ್ಪು ಪ್ರಕಟಿಸಿದ್ದಾರೆ.
2016ರ ಜೂನ್ 21ರಂದು ಬೆಳಗ್ಗೆ 9.25ರ ಸುಮಾರಿಗೆ ಹೆಮ್ಮಾಡಿ ಕಡೆಯಿಂದ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ಕಾರು ಮೊವಾಡಿ ಕ್ರಾಸ್ ಬಳಿ ಶಾಲಾ ರಸ್ತೆಯತ್ತ ತಿರುಗುತ್ತಿದ್ದಾಗ, ತ್ರಾಸಿ ಕಡೆಯಿಂದ ಕುಂದಾಪುರದತ್ತ ವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿತ್ತು ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು.
ಅಪಘಾತದಲ್ಲಿ ಓಮ್ನಿಯಲ್ಲಿದ್ದ ಅನನ್ಯ ಡಿಸಿಲ್ವಾ, ನಿಖಿತ್ ಡಿಸಿಲ್ವಾ, ರಾಯಸ್ಟನ್ ಲೋಬೋ, ಕ್ಲೇರಿಸಾ, ಅನ್ಸಿಟಾ ಓಲೇವಿರಾ, ಆಲ್ವಿಟಾ ಓಲೇವಿರಾ, ಬೆಲ್ವಿನ್ ಡಯಾಸ್ ಹಾಗೂ ಕೆಲಿಸ್ಟಾ ಮೃತಪಟ್ಟಿದ್ದರು. ಇನ್ನು ಕೆಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ವೃತ್ತ ನಿರೀಕ್ಷಕ ಸುದರ್ಶನ ಹಾಗೂ ನಂತರ ರಾಘವ ಎಸ್. ಪಡೀಲ್ ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಉಮಾ ದಾಮೋದರ ನಾಯ್ಕ ಅವರು ವಾದ ಮಂಡಿಸಿದ್ದರು.
ಸೆ.26ರಿಂದ ಮೂಡುಬಿದಿರೆಯಲ್ಲಿ ಕಂಬಳ ಅಕಾಡೆಮಿಯಿಂದ ಓಟಗಾರರಿಗೆ ತರಬೇತಿ ಶಿಬಿರ ಆರಂಭ ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ನಕಲಿ ವೆಬ್ಸೈಟ್ ; ಪ್ರಕರಣ ದಾಖಲು ಉಡುಪಿ : ಕೊಲ್ಲೂರಿನ ಶ್ರೀ…
ಡಿಕೆ ಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ನವದೆಹಲಿ: ಡಿಕೆ ಶಿವಕುಮಾರ್ ಸರ್ಕಾರಕ್ಕೆ…
ಉಡುಪಿ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ…
ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ರೈಲು ಸಂಚಾರ ಉಡುಪಿ: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಮಡ್ಗಾಂವ್ ವಿಶೇಷ…
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್…