Featured

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ – Vishwanews24

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ

ಕುಂದಾಪುರ:  400 ವರ್ಷಗಳ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ರಥ ನಿರ್ಮಾಣಗೊಂಡಿದೆ. ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ಅವರು ಈ ಬ್ರಹ್ಮರಥವನ್ನು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೊದಲಿನ ರಥದ ಮಾದರಿಯಲ್ಲೇ ನೂತನ ರಥ ಕುಂಭಾಸಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಮೂಕಾಂಬಿಕೆಗೆ ಬ್ರಹ್ಮರಥ ಸಮರ್ಪಣೆಯಾಗಲಿದೆ.

ಆ ಪ್ರಯುಕ್ತ ಫೆ.15ರಂದು ಕೋಟೇಶ್ವರದಲ್ಲಿ ಪುರ ಪ್ರವೇಶಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ತಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೇಟ್ಟಿ ಕೆರಾಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಶೇಖರ ಆಚಾರ್ಯ, ವಿವಿಧ ದೇವಸ್ಥಾನಗಳ ಪ್ರಮುಖರು ಉಪಸ್ಥಿತರಿದ್ದರು.

ನೂತನ ಬ್ರಹ್ಮರಥವನ್ನು ಕುಂದಾಪುರ ಮಾರ್ಗದುದ್ದಕ್ಕೂ ದೇವಸ್ಥಾನಗಳ ವತಿಯಿಂದ ವಾದ್ಯಘೋಷ, ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ರಥಕ್ಕೆ ಪೂಜೆ ಸಲ್ಲಿಸಲಾಯಿತು. ಸಾಕಷ್ಟು ಸಂಖ್ಯೆಯಲ್ಲಿ ಸೇರಿದ ಕುಂದಾಪುರದ ವಿವಿಧ ದೇವಸ್ಥಾನಗಳ ಪ್ರಮುಖರು, ಸಾರ್ವಜನಿಕರು ನೂತನ ರಥಕ್ಕೆ ಹೂ ಸಮರ್ಪಿಸಿದರು.

ಫೆ.16ರಂದು ಕೊಲ್ಲೂರಿನಲ್ಲಿ ದಾನಿಗಳ ಸಮ್ಮುಖದಲ್ಲಿ ರಥ ದೇವಿಗೆ ಸಮರ್ಪಣೆಯಾಗಲಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago