ಲಕ್ನೋ,: ಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ ಅಥವಾ ಕೊಲೆಯ ಒಂದೇ ಒಂದು ಪ್ರಕರಣವೂ ವರದಿಯಾಗಿಲ್ಲ. ಅರವತ್ತಾರು ಕೋಟಿ ಜನರು ಆಗಮಿಸಿ ಭಾಗವಹಿಸಿದರು. ಕುಂಭಮೇಳದಲ್ಲಿ ಪಾಲ್ಗೊಂಡು ಸಂತೋಷದಿಂದ ಹೋಗಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಸಿಎಂ ಯೋಗಿ ತಿರುಗೇಟು ನೀಡಿದ್ದಾರೆ.
ಪ್ರಯಾಗ್ರಾಜ್ನ ದೋಣಿ ಚಾಲಕರನ್ನು ಶೋಷಿಸಲಾಗಿದೆ ಎಂಬ ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿದಯೋಗಿ, ನಾನು ದೋಣಿ ಚಾಲಕನ ಕುಟುಂಬದ ಯಶಸ್ಸಿನ ಕಥೆಯನ್ನು ಹೇಳುತ್ತಿದ್ದೇನೆ. ಅವರ ಬಳಿ 130 ದೋಣಿಗಳಿವೆ. 45 ದಿನಗಳಲ್ಲಿ (ಮಹಾ ಕುಂಭ) ಅವರು 30 ಕೋಟಿ ರೂ. ಲಾಭ ಗಳಿಸಿದ್ದಾರೆ. ಇದರರ್ಥ ಪ್ರತಿ ದೋಣಿಯಿಂದ 23 ಲಕ್ಷ ರೂ. ಗಳಿಸಿದ್ದಾರೆ. ಪ್ರತಿದಿನ ಅವರು ಒಂದು ದೋಣಿಯಿಂದ 50,000-52,000 ರೂ. ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಹಾ ಕುಂಭಮೇಳಕ್ಕೆ 7,500 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿತ್ತು. ಇದರಿಂದ ದಾಖಲೆಯ 3 ಲಕ್ಷ ಕೋಟಿ ರೂಪಾಯಿ ವ್ಯವಹಾರ ಆಗಿದೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಸಮರ್ಥಿಸಿಕೊಂಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…