ಲಕ್ನೋ,: ಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ ಅಥವಾ ಕೊಲೆಯ ಒಂದೇ ಒಂದು ಪ್ರಕರಣವೂ ವರದಿಯಾಗಿಲ್ಲ. ಅರವತ್ತಾರು ಕೋಟಿ ಜನರು ಆಗಮಿಸಿ ಭಾಗವಹಿಸಿದರು. ಕುಂಭಮೇಳದಲ್ಲಿ ಪಾಲ್ಗೊಂಡು ಸಂತೋಷದಿಂದ ಹೋಗಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಸಿಎಂ ಯೋಗಿ ತಿರುಗೇಟು ನೀಡಿದ್ದಾರೆ.
ಪ್ರಯಾಗ್ರಾಜ್ನ ದೋಣಿ ಚಾಲಕರನ್ನು ಶೋಷಿಸಲಾಗಿದೆ ಎಂಬ ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿದಯೋಗಿ, ನಾನು ದೋಣಿ ಚಾಲಕನ ಕುಟುಂಬದ ಯಶಸ್ಸಿನ ಕಥೆಯನ್ನು ಹೇಳುತ್ತಿದ್ದೇನೆ. ಅವರ ಬಳಿ 130 ದೋಣಿಗಳಿವೆ. 45 ದಿನಗಳಲ್ಲಿ (ಮಹಾ ಕುಂಭ) ಅವರು 30 ಕೋಟಿ ರೂ. ಲಾಭ ಗಳಿಸಿದ್ದಾರೆ. ಇದರರ್ಥ ಪ್ರತಿ ದೋಣಿಯಿಂದ 23 ಲಕ್ಷ ರೂ. ಗಳಿಸಿದ್ದಾರೆ. ಪ್ರತಿದಿನ ಅವರು ಒಂದು ದೋಣಿಯಿಂದ 50,000-52,000 ರೂ. ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಹಾ ಕುಂಭಮೇಳಕ್ಕೆ 7,500 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿತ್ತು. ಇದರಿಂದ ದಾಖಲೆಯ 3 ಲಕ್ಷ ಕೋಟಿ ರೂಪಾಯಿ ವ್ಯವಹಾರ ಆಗಿದೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಸಮರ್ಥಿಸಿಕೊಂಡಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…