Featured

ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24

ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24

ಡೆಹ್ರಾಡೂನ್: ಈ ಬಾರಿಯ ಕುಂಭಮೇಳಕ್ಕೆ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ಟೆಸ್ಟ್ ರಿಪೋರ್ಟ್ ಕಡ್ಡಾಯ ಎಂದು ಉತ್ತರಾಖಂಡದ ಸರ್ಕಾರ ಆದೇಶ ಹೊರಡಿಸಿದೆ.

ಉತ್ತರಾಖಂಡದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ಒಂದೇ ದಿನ 200 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಹಾಗಾಗಿ ಹರಿದ್ವಾರದಲ್ಲಿ ನಡೆಯಲಿರುವ ಈ ಬಾರಿಯ ಕುಂಭಮೇಳಕ್ಕೆ ಬರುವ ಭಕ್ತರಿಗೆ 72 ಗಂಟೆಗಳ ಒಳಗಿನ ಕೊರೊನಾ ನೆಗೆಟಿವ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ : ಸಿಡಿ ಲೇಡಿಯ 2ನೇ ವಿಡಿಯೋ ಬಿಡುಗಡೆ : ಅಪ್ಪ ಅಮ್ಮನಿಗೆ ರಕ್ಷಣೆ ನೀಡಿ , ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್‌ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ -Vishwanews24

ಈಗಾಗಲೇ ಹರಿದ್ವಾರದಲ್ಲಿ ಕುಂಭಮೇಳಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎಪ್ರಿಲ್ 1 ರಿಂದ ಕುಂಭಮೇಳ ಆರಂಭವಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಒಂದೇ ದಿನ ಹರಿದ್ವಾರದಲ್ಲಿ 71, ಡೆಹ್ರಾಡೂನ್ 63, ನೈನಿತಾಲ್ 22 ಮತ್ತು ಇತರ ನಗರಗಳಲ್ಲಿ ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.

ಕುಂಭಮೇಳಕ್ಕೆ ಆಗಮಿಸುವ ಭಕ್ತರು 72 ಗಂಟೆಗಳ ಒಳಗಿನ ಕೋವಿಡ್ ನೆಗೆಟಿವ್ ವರದಿ ಅಥವಾ ಕೊರೊನಾ ಲಸಿಕೆ ಪಡೆದುಕೊಂಡ ವರದಿಯನ್ನು ಸಲ್ಲಿಸಿ ಕುಂಭಮೇಳದಲ್ಲಿ ಪಾಲ್ಗೊಳ್ಳುವಂತೆ ಉತ್ತರಾಖಂಡದ ಹೈಕೋರ್ಟ್ ಆದೇಶ ಹೊರಡಿಸಿರುವುದಾಗಿ ಕುಂಭಮೇಳದ ಮುಖ್ಯ ಕಾರ್ಯದರ್ಶಿ ಓಂ ಪ್ರಕಾಶ್ ಸ್ಥಳೀಯ ಮಾಧ್ಯಮದೊಂದಿಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago