ಹರಿದ್ವಾರ : ದೇಶದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಅಲೆ ಹಠಾತ್ ಏರಿಕೆಯಿಂದ ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಯಾದ ಸಂದರ್ಭದಲ್ಲೇ ಉತ್ತರಾಖಂಡದ ಹರಿದ್ವಾರದಲ್ಲಿ ಮಹಾಕುಂಭ ಮೇಳ ಆರಂಭವಾಗಿದ್ದು, ಲಕ್ಷೋಪಲಕ್ಷ ಮಂದಿ ಗಂಗಾ ಪವಿತ್ರ ಸ್ನಾನಕ್ಕಾಗಿ ಹರಿದ್ವಾರಕ್ಕೆ ಧಾವಿಸಿದ್ದಾರೆ.
ಮಹಾಕುಂಭ ಮೇಳಕ್ಕೆ ಆಗಮಿಸಿದ ಜನರ ನಡುವೆ ಸಾಮಾಜಿಕ ಅಂತರ ಸೇರಿ ಕೋವಿಡ್ ನಿಯಮಾವಳಿಗಳು ಮಾಯವಾಗಿವೆ. ಮಹಾಕುಂಭ ಪವಿತ್ರ ಸ್ನಾನಕ್ಕಾಗಿ ಬಂದವರನ್ನು ನಿರ್ವಹಿಸುವುದು ಕೂಡ ಕಷ್ಟವಾಗಿದೆ.
ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಎಂದು ನಿರಂತರವಾಗಿ ಭಕ್ತಾದಿಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಅವರು ಕೇಳುತ್ತಿಲ್ಲ. ದೇಶದ ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದ ಭಕ್ತಾದಿಗಳ ನಡುವೆ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಕಷ್ಟವಾಗುತ್ತಿದೆ. ಜನರ ಗುಂಪಿನಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವವರಿಗೆ ದಂಡ ವಿಧಿಸಲು ಕೂಡ ಸಾಧ್ಯವಾಗುತ್ತಿಲ್ಲ. ಹರ್ ಕಿ ಪೌರಿ ಘಾಟ್ ನಲ್ಲಿ ಸಾಮಾಜಿಕ ಅಂತರ ಇಲ್ಲದಂತಾಗಿದೆ ಎಂದು ಹರಿದ್ವಾರದಲ್ಲಿ ಕಾರ್ಯ ನಿರತವಾಗಿರುವ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿರುವುದನ್ನು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನ ನಿತ್ಯ ಏರಿಕೆಯಾಗುತ್ತಿದೆ. ಘಾಟ್ ನಲ್ಲಿ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಪ್ರಯತ್ನ ಪಟ್ಟರೆ ಕಾಲ್ತುಳಿತ ಸಂಭವಿಸುವ ಸಾಧ್ಯತೆ ಇದೆ ಎಂದು ಕೂಡ ಗುಂಜ್ಯಾಲ್ ತಿಳಿಸಿದ್ದಾರೆ.
ಇನ್ನು, ಪವಿತ್ರ ಗಂಗಾ ಸ್ನಾನಕ್ಕಾಗಿ ಮಹಾ ಕುಂಭ ಸಂದರ್ಭದಲ್ಲಿ ಬೆಳಗ್ಗೆ ಏಳು ಗಂಟೆಯವರೆಗೆ ಮಾತ್ರ ಸಾಮಾನ್ಯ ಜನರಿಗೆ ಅವಕಾಶವಿದ್ದು, ತದನಂತರ ಸಾಧುಗಳಿಗೆ ಅವಕಾಶವಿದೆ.
ಜನರು ತಾವೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್ -Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…