ಹರಿದ್ವಾರ : ದೇಶದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಅಲೆ ಹಠಾತ್ ಏರಿಕೆಯಿಂದ ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಯಾದ ಸಂದರ್ಭದಲ್ಲೇ ಉತ್ತರಾಖಂಡದ ಹರಿದ್ವಾರದಲ್ಲಿ ಮಹಾಕುಂಭ ಮೇಳ ಆರಂಭವಾಗಿದ್ದು, ಲಕ್ಷೋಪಲಕ್ಷ ಮಂದಿ ಗಂಗಾ ಪವಿತ್ರ ಸ್ನಾನಕ್ಕಾಗಿ ಹರಿದ್ವಾರಕ್ಕೆ ಧಾವಿಸಿದ್ದಾರೆ.
ಮಹಾಕುಂಭ ಮೇಳಕ್ಕೆ ಆಗಮಿಸಿದ ಜನರ ನಡುವೆ ಸಾಮಾಜಿಕ ಅಂತರ ಸೇರಿ ಕೋವಿಡ್ ನಿಯಮಾವಳಿಗಳು ಮಾಯವಾಗಿವೆ. ಮಹಾಕುಂಭ ಪವಿತ್ರ ಸ್ನಾನಕ್ಕಾಗಿ ಬಂದವರನ್ನು ನಿರ್ವಹಿಸುವುದು ಕೂಡ ಕಷ್ಟವಾಗಿದೆ.
ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಎಂದು ನಿರಂತರವಾಗಿ ಭಕ್ತಾದಿಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದರೂ ಅವರು ಕೇಳುತ್ತಿಲ್ಲ. ದೇಶದ ಬೇರೆ ಬೇರೆ ಕಡೆಗಳಿಂದ ಇಲ್ಲಿಗೆ ಬಂದ ಭಕ್ತಾದಿಗಳ ನಡುವೆ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಕಷ್ಟವಾಗುತ್ತಿದೆ. ಜನರ ಗುಂಪಿನಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವವರಿಗೆ ದಂಡ ವಿಧಿಸಲು ಕೂಡ ಸಾಧ್ಯವಾಗುತ್ತಿಲ್ಲ. ಹರ್ ಕಿ ಪೌರಿ ಘಾಟ್ ನಲ್ಲಿ ಸಾಮಾಜಿಕ ಅಂತರ ಇಲ್ಲದಂತಾಗಿದೆ ಎಂದು ಹರಿದ್ವಾರದಲ್ಲಿ ಕಾರ್ಯ ನಿರತವಾಗಿರುವ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿರುವುದನ್ನು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ದಿನ ನಿತ್ಯ ಏರಿಕೆಯಾಗುತ್ತಿದೆ. ಘಾಟ್ ನಲ್ಲಿ ಸಾಮಾಜಿಕ ಅಂತರವನ್ನು ನಿರ್ವಹಿಸುವುದಕ್ಕೆ ಪ್ರಯತ್ನ ಪಟ್ಟರೆ ಕಾಲ್ತುಳಿತ ಸಂಭವಿಸುವ ಸಾಧ್ಯತೆ ಇದೆ ಎಂದು ಕೂಡ ಗುಂಜ್ಯಾಲ್ ತಿಳಿಸಿದ್ದಾರೆ.
ಇನ್ನು, ಪವಿತ್ರ ಗಂಗಾ ಸ್ನಾನಕ್ಕಾಗಿ ಮಹಾ ಕುಂಭ ಸಂದರ್ಭದಲ್ಲಿ ಬೆಳಗ್ಗೆ ಏಳು ಗಂಟೆಯವರೆಗೆ ಮಾತ್ರ ಸಾಮಾನ್ಯ ಜನರಿಗೆ ಅವಕಾಶವಿದ್ದು, ತದನಂತರ ಸಾಧುಗಳಿಗೆ ಅವಕಾಶವಿದೆ.
ಜನರು ತಾವೇ ನಿಬಂಧನೆ ಹಾಕಿಕೊಂಡರೆ ಲಾಕ್ ಡೌನ್ ಅವಶ್ಯಕತೆಯಿಲ್ಲ: ಸಚಿವ ಸುಧಾಕರ್ -Vishwanews24
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…