ಬೆಂಗಳೂರು: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್ಬುಕ್ನಲ್ಲಿ ಜಾಹೀರಾತು ನೀಡಿದ್ದಾನೆ.
ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ. ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.
ಕೆಲವರಿಗೆ ಟಿಕೆಟ್ ಬುಕ್ ಮಾಡಿ, ನಂತರ ರದ್ದು ಮಾಡಿದ್ದಾನೆ. ರದ್ದು ಮಾಡಿದ ಬಳಿಕ ವಾಪಸ್ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ.
ಇನ್ನು ಕೆಲವರಿಗೆ, ಪ್ರಯಾಗ್ ರಾಜ್ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ. ವಾಪಸ್ ಆದ ಹಣವನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಟಿಕೆಟ್ ರದ್ದಾದ ಬಳಿಕ ರಾಘವೇಂದ್ರ ರಾವ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ. ಈ ಬಗ್ಗೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ 20 ಕ್ಕೂ ಹೆಚ್ಚು ಜನರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ರಾಘವೇಂದ್ರ ರಾವ್ನನ್ನು ಬಂಧಿಸಿದ್ದಾರೆ.
ವಂಚಿಸಿ ಪಡೆದಿದ್ದ ಹಣದಲ್ಲಿ ರಾಘವೇಂದ್ರ ರಾವ್ ಬೆಟ್ಟಿಂಗ್ ಆಡಿ ಸೋತಿದ್ದಾನೆ. ರಾಂಘವೇಂದ್ರ ರಾವ್ ಬೆಟ್ಟಿಂಗ್ ಆ್ಯಪ್ನಲ್ಲಿ ಹಣ ಹಾಕಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಗೋವಿಂದರಾಜನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…