Featured

ಕುಂಭಮೇಳ ಪ್ರವಾಸ ಹೆಸರಲ್ಲಿ ಜನರಿಂದ ಹಣ ಪಡೆದು ಲಕ್ಷಾಂತರ ರೂ. ವಂಚನೆ  – vishwanews24

ಕುಂಭಮೇಳ ಪ್ರವಾಸ ಹೆಸರಲ್ಲಿ ಜನರಿಂದ ಹಣ ಪಡೆದು ಲಕ್ಷಾಂತರ ರೂ. ವಂಚನೆ

ಬೆಂಗಳೂರು: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ.

ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆ. ಆಗ, ಆರೋಪಿ ರಾಘವೇಂದ್ರ ರಾವ್, ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂ. ಪಡೆದಿದ್ದಾನೆ.​ ಹೀಗೆ, ಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂ. ಪಡೆದಿದ್ದಾನೆ. ಬಳಿಕ, ರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.

ಕೆಲವರಿಗೆ ಟಿಕೆಟ್ ಬುಕ್ ಮಾಡಿ, ನಂತರ ರದ್ದು ಮಾಡಿದ್ದಾನೆ. ರದ್ದು ಮಾಡಿದ ಬಳಿಕ ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ.

ಇನ್ನು ಕೆಲವರಿಗೆ, ಪ್ರಯಾಗ್ ರಾಜ್​ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ. ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಟಿಕೆಟ್ ರದ್ದಾದ ಬಳಿಕ ರಾಘವೇಂದ್ರ ರಾವ್​ ಮೊಬೈಲ್ ಸ್ವಿಚ್​ ಆಫ್ ಮಾಡಿದ್ದಾನೆ. ಈ ಬಗ್ಗೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ 20 ಕ್ಕೂ ಹೆಚ್ಚು ಜನರು ದೂರು‌ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ರಾಘವೇಂದ್ರ ರಾವ್​ನನ್ನು ಬಂಧಿಸಿದ್ದಾರೆ.

ವಂಚಿಸಿ ಪಡೆದಿದ್ದ ಹಣದಲ್ಲಿ ರಾಘವೇಂದ್ರ ರಾವ್ ಬೆಟ್ಟಿಂಗ್ ಆಡಿ ಸೋತಿದ್ದಾನೆ. ರಾಂಘವೇಂದ್ರ ರಾವ್​ ಬೆಟ್ಟಿಂಗ್ ಆ್ಯಪ್​ನಲ್ಲಿ ಹಣ ಹಾಕಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಗೋವಿಂದರಾಜನಗರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago