ಕುಕ್ಕರ್ ಬಾಂಬ್ ಬ್ಲಾಸ್ಟ್ – ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಮಂಗಳೂರಿನಲ್ಲಿ ಸಂಭವಿಸುತ್ತಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿದೆ : ಅಲೋಕ್ ಕುಮಾರ್ – Vishwanews24

Featured, ದಕ್ಷಿಣ ಕನ್ನಡ

ಕುಕ್ಕರ್ ಬಾಂಬ್ ಬ್ಲಾಸ್ಟ್ – ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಮಂಗಳೂರಿನಲ್ಲಿ ಸಂಭವಿಸುತ್ತಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿದೆ : ಅಲೋಕ್ ಕುಮಾರ್

ಮಂಗಳೂರು : ಮಂಗಳೂರಿನಲ್ಲಿ ಭಾರೀ ದೊಡ್ಡ ಅನಾಹುತ ತಪ್ಪಿದೆ, ಇದಕ್ಕೆ ದೇವರಿಗೆ ಧನ್ಯವಾದಗಳು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅಲೋಕ್ ಕುಮಾರ್ ಮಂಗಳೂರಿನಲ್ಲಿ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ.

ಗರೋಡಿ ಕ್ಷೇತ್ರದ 200 ಮೀಟರ್ ದೂರ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದೆ. ಈ ಭಯಾನಕ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಭಕ್ತರು ಹೇಳಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಬರೀ ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಇದೇ ಸಾಕ್ಷಿ, ಮಂಗಳೂರಿನ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲಿ ನೆಲೆಯೂರಿರುವ ಕೋಟಿ-ಚೆನ್ನಯ್ಯ ಅವಳಿ ಮಹಾಪುರುಷ ಶಕ್ತಿಗಳು ಮಂಗಳೂರಿನಲ್ಲಿ ಸಂಭವಿಸುತ್ತಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿದೆ ಎಂದರು.

⏹️ ಸುಬ್ರಹ್ಮಣ್ಯ : ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ.. 📛 ನಾಪತ್ತೆಯಾದ ಗ್ರಾ.ಪಂ. ಸದಸ್ಯೆಯ ವಿಡಿಯೋ ವೈರಲ್ – Vishwanews24

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ಆಗಮಿಸಿ ಆತನ ಗುರುತು ಪತ್ತೆ ಹಚ್ಚಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಂಕಿತ ಶಾರೀಕ್ನ ಚಿಕ್ಕಮ್ಮ, ಸಹೋದರಿ ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದು ಆತನ ಗುರುತು ಪತ್ತೆ ಹಚ್ಚಿದ್ದಾರೆ. ಈತ ಮಂಗಳೂರಿನ ಗೋಡೆ ಬರಹದ ಆರೋಪಿ ಕೂಡ ಆಗಿದ್ದು, ವಿಧ್ವಂಸಕ ಕೃತ್ಯ ಎಸೆಗಲು ಸಂಚು ರೂಪಿಸಿದ್ದು, ಆತ ಗುಣಮುಖನಾದ ಬಳಿನ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದರು.

✴️ ಧರ್ಮಸ್ಥಳ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವೆ ಸ್ಮೃತಿ ಇರಾನಿ – Vishwanews24

Leave a Reply