ಮಂಗಳೂರು : ಮಂಗಳೂರಿನಲ್ಲಿ ಭಾರೀ ದೊಡ್ಡ ಅನಾಹುತ ತಪ್ಪಿದೆ, ಇದಕ್ಕೆ ದೇವರಿಗೆ ಧನ್ಯವಾದಗಳು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅಲೋಕ್ ಕುಮಾರ್ ಮಂಗಳೂರಿನಲ್ಲಿ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ.
ಗರೋಡಿ ಕ್ಷೇತ್ರದ 200 ಮೀಟರ್ ದೂರ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದೆ. ಈ ಭಯಾನಕ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಭಕ್ತರು ಹೇಳಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಬರೀ ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಇದೇ ಸಾಕ್ಷಿ, ಮಂಗಳೂರಿನ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲಿ ನೆಲೆಯೂರಿರುವ ಕೋಟಿ-ಚೆನ್ನಯ್ಯ ಅವಳಿ ಮಹಾಪುರುಷ ಶಕ್ತಿಗಳು ಮಂಗಳೂರಿನಲ್ಲಿ ಸಂಭವಿಸುತ್ತಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿದೆ ಎಂದರು.
ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ಆಗಮಿಸಿ ಆತನ ಗುರುತು ಪತ್ತೆ ಹಚ್ಚಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಂಕಿತ ಶಾರೀಕ್ನ ಚಿಕ್ಕಮ್ಮ, ಸಹೋದರಿ ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದು ಆತನ ಗುರುತು ಪತ್ತೆ ಹಚ್ಚಿದ್ದಾರೆ. ಈತ ಮಂಗಳೂರಿನ ಗೋಡೆ ಬರಹದ ಆರೋಪಿ ಕೂಡ ಆಗಿದ್ದು, ವಿಧ್ವಂಸಕ ಕೃತ್ಯ ಎಸೆಗಲು ಸಂಚು ರೂಪಿಸಿದ್ದು, ಆತ ಗುಣಮುಖನಾದ ಬಳಿನ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…