ಮಂಗಳೂರು : ಮಂಗಳೂರಿನಲ್ಲಿ ಭಾರೀ ದೊಡ್ಡ ಅನಾಹುತ ತಪ್ಪಿದೆ, ಇದಕ್ಕೆ ದೇವರಿಗೆ ಧನ್ಯವಾದಗಳು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅಲೋಕ್ ಕುಮಾರ್ ಮಂಗಳೂರಿನಲ್ಲಿ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ.
ಗರೋಡಿ ಕ್ಷೇತ್ರದ 200 ಮೀಟರ್ ದೂರ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದೆ. ಈ ಭಯಾನಕ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಭಕ್ತರು ಹೇಳಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಬರೀ ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಇದೇ ಸಾಕ್ಷಿ, ಮಂಗಳೂರಿನ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲಿ ನೆಲೆಯೂರಿರುವ ಕೋಟಿ-ಚೆನ್ನಯ್ಯ ಅವಳಿ ಮಹಾಪುರುಷ ಶಕ್ತಿಗಳು ಮಂಗಳೂರಿನಲ್ಲಿ ಸಂಭವಿಸುತ್ತಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿದೆ ಎಂದರು.
ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ಆಗಮಿಸಿ ಆತನ ಗುರುತು ಪತ್ತೆ ಹಚ್ಚಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಂಕಿತ ಶಾರೀಕ್ನ ಚಿಕ್ಕಮ್ಮ, ಸಹೋದರಿ ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದು ಆತನ ಗುರುತು ಪತ್ತೆ ಹಚ್ಚಿದ್ದಾರೆ. ಈತ ಮಂಗಳೂರಿನ ಗೋಡೆ ಬರಹದ ಆರೋಪಿ ಕೂಡ ಆಗಿದ್ದು, ವಿಧ್ವಂಸಕ ಕೃತ್ಯ ಎಸೆಗಲು ಸಂಚು ರೂಪಿಸಿದ್ದು, ಆತ ಗುಣಮುಖನಾದ ಬಳಿನ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…