ಸುಬ್ರಹ್ಮಣ್ಯ: ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ನೂತನ ಬ್ರಹ್ಮ ರಥವನ್ನು ರಸ್ತೆ ಮಾರ್ಗ ಮೂಲಕ ಕ್ಷೇತ್ರಕ್ಕೆ ತರಲಾಗಿದ್ದು , ರಥ ಬರುವ ಹಲವು ಕಡೆಗಳಲ್ಲಿ ಬ್ರಹ್ಮರಥಕ್ಕೆ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ ಬ್ರಹ್ಮರಥಕ್ಕೆ ಕ್ಷೇತ್ರದ ವತಿಯಿಂದ ಪೂಜೆ ನೆರವೇರಿಸಲಾಯಿತು. ಧಾರ್ಮಿಕ ವಿಧಿ-ವಿಧಾನಗಳ ಮೂಲಕ ರಥವನ್ನು ದೇವರಿಗೆ ಸಮರ್ಪಿಸಲಾಯಿತು. ಬ್ರಹ್ಮ ರಥ ಸಂಚರಿಸುವ ದಾರಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬ್ರಹ್ಮರಥವನ್ನು ಸ್ವಾಗತ ಮಾಡಿದ್ದರು.
ಜಾತಿ-ಧರ್ಮದ ಕಟ್ಟುಪಾಡುಗಳನ್ನು ಬಿಟ್ಟು ಎಲ್ಲಾ ಸಮಾಜ ರಥವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಸ್ವಾಗತಿಸಿದ್ದು ವಿಶೇಷವಾಗಿತ್ತು. ರಥದಲ್ಲಿ ಸಾಗಿ ಬಂದ ನೂರಾರು ಭಕ್ತರಿಗೆ ಮರ್ದಾಳದ ಮುಸ್ಲಿಂ ಬಾಂಧವರು ಸಿಹಿ ತಿನಿಸುಗಳನ್ನು ವಿತರಿಸುವ ಮೂಲಕ ಬ್ರಹ್ಮರಥವನ್ನು ಸ್ವಾಗತಿಸಿದರು. ಮರ್ಧಾಳದ ಮಸೀದಿ ವತಿಯಿಂದ ಬ್ರಹ್ಮರಥದ ಜೊತೆಗೆ ಬಂದ ಭಕ್ತಾಧಿಗಳಿಗೆ ಲಡ್ಡು ಹಾಗೂ ತಂಪುಪಾನೀಯದ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಕೋಟೇಶ್ವರದಲ್ಲಿ ಸಿದ್ಧಗೊಂಡ ಬ್ರಹ್ಮರಥ ಬುಧವಾರವು ಅದ್ದೂರಿ ಮೆರವಣಿಗೆಯ ಮೂಲಕ ಕುಕ್ಕೆ ಪುರ ಪ್ರವೇಶಿಸಿದ್ದು ಬ್ರಹ್ಮ ರಥ ಸುಬ್ರಹ್ಮಣ್ಯ ವನ್ನು ತಲುಪಲಿರುವ ಹಿನ್ನಲೆಯಲ್ಲಿ ,ಭವ್ಯ ಮೆರವಣಿಗೆ ಮೂಲಕ ರಥವನ್ನು ಸ್ವಾಗತಿಸಲಾಯಿತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…