ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7ರ ಶನಿವಾರ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.
ಪ್ರಾತಃಕಾಲ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು.
ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ಹಕ ಅಧಿಕಾರಿ ಯೇಸುರಾಜ್ ಸೇರಿದಂತೆ ಕ್ಷೇತ್ರದ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…