ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನ. 16ರಿಂದ ಡಿ. 2ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ. 14ರಿಂದ ಡಿ. 2ರ ತನಕ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ನ. 15ರಂದು ಶನಿವಾರ ಏಕಾದಶಿ ಹಾಗೂ ಮೂಲಮೃತ್ತಿಕಾ ಪ್ರಸಾದ ವಿತರಣೆ, ನ. 16ರಂದು ಕೊಪ್ಪರಿಗೆ ಏರಿ ಜಾತ್ರಾ ಮಹೋತ್ಸವ ಆರಂಭವಾಗುವುದರಿಂದ ನ. 14ರಿಂದಲೇ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ. ಡಿ. 3 ಬುಧವಾರದಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.
ಲಕ್ಷದೀಪೋತ್ಸವ (ನ.19), ಚೌತಿ (ನ.24), ಪಂಚಮಿ (ನ.25) ದಿನದಂದು ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ನ. 26) ದಿನದಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಅಲ್ಲದೆ ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನೆರವೇರುವುದಿಲ್ಲ.
ಜಾತ್ರೆ ಮತ್ತು ಪ್ರಮುಖ ದಿನಗಳನ್ನು ಬಿಟ್ಟು ಇತರ ದಿನಗಳಲ್ಲಿ ಆಶ್ಲೇಷಾ ಬಲಿ, ಪಂಚಾಮೃತ ಮಹಾಭಿಷೇಕ, ಶೇಷ ಸೇವೆ, ಕಾರ್ತಿಕಪೂಜೆ, ಮಹಾಪೂಜೆ, ತುಲಾಭಾರ, ನಾಗಪ್ರತಿಷ್ಠೆ, ಉತ್ಸವ, ರಥೋತ್ಸವ ಮೊದಲಾದ ಸೇವೆಗಳು ನೆರವೇರಲಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…