Featured

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್ – vishwanews24

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ ಬಾಲಿವುಡ್​ ನಟ ಅರ್ಜುನ್ ಕಪೂರ್

ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತೀ ದಿನ ಭಕ್ತರ ದಂಡು ಹರಿದುಬರುತ್ತದೆ. ನಾಗಾರಾಧನೆಯ ಪುಣ್ಯಕ್ಷೇತ್ರವು ಜನಸಾಮಾನ್ಯರನ್ನು ಮಾತ್ರವಲ್ಲದೇ ಹೆಸರಾಂತ ಸೆಲೆಬ್ರಿಟಿಗಳನ್ನೂ ತನ್ನತ್ತ ಆಕರ್ಷಿಸುತ್ತದೆ. ಈಗಾಗಲೇ ಹಲವು ಜನಪ್ರಿಯ ತಾರೆಯರು ಇಲ್ಲಿಗೆ ಭೇಟಿ ಕೊಟ್ಟಿದ್ದು, ಇದೀಗ ಅರ್ಜುನ್ ಕಪೂರ್ ಕೂಡಾ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ, ವಿಶೇಷ ಪೂಜಾ ವಿಧಿ ವಿಧಾನಗಳಲ್ಲಿಯೂ ಭಾಗಿಯಾಗಿ ಧನ್ಯರಾಗಿದ್ದಾರೆ.

ಬಾಲಿವುಡ್ ಸೂಪರ್ ಸ್ಟಾರ್ ಅರ್ಜುನ್ ಕಪೂರ್ ಅವರು ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿದರು. ಕಳೆದ ಮೂರು ದಿನಗಳಿಂದ ಕುಕ್ಕೆ ಕ್ಷೇತ್ರದಲ್ಲಿ ವಾಸ್ತವ್ಯವಿದ್ದ ಅವರು ಭಾನುವಾರ ಸರ್ಪ ಸಂಸ್ಕಾರ ಸೇವೆ ಸಲ್ಲಿಸಿದ್ದು, ಸೋಮವಾರ ಆಶ್ಲೇಷ ಬಲಿ ಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ:👇

 

ಪೂಜೆ ಬಳಿಕ ಅವರು ದೇವಾಲಯದ ಆಡಳಿತ ಕಚೇರಿಗೆ ಭೇಟಿ ನೀಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ನಟರನ್ನು ದೇಗುಲದ ವತಿಯಿಂದ ಗೌರವಿಸಿದರು. ಈ ವೇಳೆ ದೇವಾಲಯದ ಪಿಆರ್‌ಒ ಜಯರಾಮ್ ರಾವ್, ಮನ್ಮಥ ಬಟ್ಟೋಡಿ ಸೇರಿದಂತೆ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ನಟ ಅರ್ಜುನ್ ಕಪೂರ್ ಅವರ ಭೇಟಿ ಕ್ಷೇತ್ರದಲ್ಲಿ ವಿಶೇಷ ಗಮನ ಸೆಳೆಯಿತು.

ಇದನ್ನೂ ಓದಿ:👇

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago