ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟು ನಿಷೇಧ : ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ – Vishwanews24
ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟು ನಿಷೇಧ : ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ.
ದೇವಳದ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದ್ದು, ಮತ್ತೊಂದು ವಿವಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಾಕ್ಷಿಯಾಗುವ ಲಕ್ಷಣಗಳು ಕಂಡುಬಂದಿದೆ.

ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ. ಸದ್ಯ ದೇವಳದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ ಕೆಲಸದ ನಿಮಿತ್ತ ದ.ಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ್ದು, ಈ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
