Featured

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ, ಇಂದು ಪಂಚಮಿ ರಥೋತ್ಸವ,ನಾಳೆ ಬ್ರಹ್ಮರಥೋತ್ಸವ -Vishwanews24

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ, ಇಂದು ಪಂಚಮಿ ರಥೋತ್ಸವ,ನಾಳೆ ಬ್ರಹ್ಮರಥೋತ್ಸವ -Vishwanews24

ಭಕ್ತರಿಗೆ ಪ್ರವೇಶ ನಿರ್ಬಂಧ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಆರಂಭಗೊಂಡಿದೆ. ಈ ಬಾರಿ ಕೋವಿಡ್ ನಿಯಮಾವಳಿಯಂತೆ ಜಾತ್ರೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮುಂಜಾಗ್ರತೆಗಾಗಿ ಅಂತರ ಜಿಲ್ಲಾ ಹಾಗೂ ಅಂತರ ರಾಜ್ಯದ ಭಕ್ತರನ್ನು ಸುಬ್ರಹ್ಮಣ್ಯಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ಧ ಪಂಚಮಿಯ ದಿನವಾದ ಡಿ.೧೯ರಂದು ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ.
ಮಧ್ಯಾಹ್ನ ಪಲ್ಲಪೂಜೆ,ರಾತ್ರಿ ವಿಶೇಷ ಪಲ್ಲಕ್ಕಿ ಉತ್ಸವ ಮತ್ತು ಬಂಡಿ ಉತ್ಸವ ದೇವಳದ ಹೊರಾಂಗಣದಲ್ಲಿ ನಡೆಯಲಿದೆ.

ದೇವಳದ ವತಿಯಿಂದ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ ಭದ್ರತೆ ಹಾಗೂ ತಪಾಸಣೆ ನಡೆಸಲಾಗುತ್ತಿದೆ. ಕ್ಷೇತ್ರಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಎಡೆಸ್ನಾನವನ್ನು ರದ್ದುಪಡಿಸಲಾಗಿತ್ತು. ಆದರೆ, ಕೆಲವೇ ಕೆಲವು ಮಂದಿ ಬೀದಿ ಮಡೆಸ್ನಾನ ಮಾಡುವ ದೃಶ್ಯ ಕಂಡು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಕಾರ್ಯ ನಿರ್ವಾಹಣಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಎಲ್ಲಾ ಕಾರ್ಯಗಳೂ ನಡೆಯುತ್ತಿವೆ.

ಅವಳಿ ರಥಗಳಿಗೆ ಪತಾಕೆಗಳನ್ನ ಇರಿಸಿ ಬಳಿಕ ಫಲವಸ್ತುಗಳಿಂದ,ಹೂವುಗಳಿAದ ಅಲಂಕಾರ ನೆರವೇರಲಿದೆ.ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆ ವೇಳೆ ಸಂತೆ ವ್ಯಾಪಾರಿ ಅಂಗಡಿಗಳನ್ನು ನಿರ್ಭಂಧಿಸಲಾಗಿದೆ.ಜಾತ್ರಾ ವೇಳೆ ಗರಿಷ್ಟ ಪ್ರಮಾಣದಲ್ಲಿ ಕೋವಿಡ್-೧೯ ನಿಯಮ ಪಾಲನೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ದೇವಳದ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago