ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.
ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.
ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ
ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…