ಮಂಗಳೂರು : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ.
ಕರಾವಳಿಯಲ್ಲಿ ಇದೀಗ ಜಾತ್ರೆಗಳ ಸೀಸನ್ ಪ್ರಾರಂಭವಾಗಿದ್ದು, ಈ ನಡುವೆ ಈಗಾಗಲೇ ಧರ್ಮದಂಗಲ್ ಪ್ರಾರಂಭವಾಗಿದೆ. ಡಿಸೆಂಬರ್ 18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.
ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…