Featured

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ : ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ – vishwanews24

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ  – ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ

ಮಂಗಳೂರು : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ.

ಕರಾವಳಿಯಲ್ಲಿ ಇದೀಗ ಜಾತ್ರೆಗಳ ಸೀಸನ್ ಪ್ರಾರಂಭವಾಗಿದ್ದು, ಈ ನಡುವೆ ಈಗಾಗಲೇ ಧರ್ಮದಂಗಲ್ ಪ್ರಾರಂಭವಾಗಿದೆ. ಡಿಸೆಂಬರ್ 18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.

ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

7 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

8 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

9 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

9 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago