Featured

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ : ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ – vishwanews24

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ  – ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಒತ್ತಾಯ

ಮಂಗಳೂರು : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ.

ಕರಾವಳಿಯಲ್ಲಿ ಇದೀಗ ಜಾತ್ರೆಗಳ ಸೀಸನ್ ಪ್ರಾರಂಭವಾಗಿದ್ದು, ಈ ನಡುವೆ ಈಗಾಗಲೇ ಧರ್ಮದಂಗಲ್ ಪ್ರಾರಂಭವಾಗಿದೆ. ಡಿಸೆಂಬರ್ 18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.

ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.

Vishwa News 24

Recent Posts

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

2 minutes ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

12 minutes ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

17 minutes ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

32 minutes ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

59 minutes ago

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು – vishwanews24

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…

1 hour ago