ಮಂಗಳೂರು : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ.
ಕರಾವಳಿಯಲ್ಲಿ ಇದೀಗ ಜಾತ್ರೆಗಳ ಸೀಸನ್ ಪ್ರಾರಂಭವಾಗಿದ್ದು, ಈ ನಡುವೆ ಈಗಾಗಲೇ ಧರ್ಮದಂಗಲ್ ಪ್ರಾರಂಭವಾಗಿದೆ. ಡಿಸೆಂಬರ್ 18 ರಂದು ಕುಕ್ಕೆಯಲ್ಲಿ ಚಂಪಾ ಷಷ್ಠಿ ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಅಲ್ಲದೆ ಈ ಸಂಬಂಧ ಹಿಂದೂ ಸಂಘಟನೆ ಮುಖಂಡರು ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.
ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಹಾಕಿದ್ದಾರೆ. ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ನಲ್ಲಿ ತಿಳಿಸಲಾಗಿದೆ. ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದಾಗಿದೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…