Featured

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ನೆಗೆಟಿವ್‌ ವರದಿ ಇದ್ದರಷ್ಟೇ ಸೇವೆಗೆ ಅವಕಾಶ -Vishwanews24

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ನೆಗೆಟಿವ್‌ ವರದಿ ಇದ್ದರಷ್ಟೇ ಸೇವೆಗೆ ಅವಕಾಶ -Vishwanews24

ಪ್ರತಿದಿನ 100 ಭಕ್ತರಿಗೆ ಸರ್ಪಸಂಸ್ಕಾರ ಸೇವೆ ನೆರವೇರಿಸಲು ಅವಕಾಶ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಮತ್ತು ಸೇವೆಗಳನ್ನು ನೆರವೇರಿಸಲು ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ.

2 ಡೋಸ್‌ ಲಸಿಕೆ ಪಡೆದ ಮತ್ತು 72 ಗಂಟೆ ಮುಂಚಿತವಾಗಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಸೇವೆ ಮತ್ತು ದರ್ಶನ ಸಂದರ್ಭ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಲ್ಲಲ್ಲಿ ಭದ್ರತಾ ಸಿಬಂದಿ ನಿಯೋಜಿಸಲಾಗಿದೆ ಮಾತ್ರವಲ್ಲದೇ ಈ ಸಿಬಂದಿ ಭಕ್ತರಿಗೆ ಕೋವಿಡ್‌ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

100 ಭಕ್ತರಿಗೆ ಸರ್ಪಸಂಸ್ಕಾರ ಸೇವೆ ನೆರವೇರಿಸಲು ಅವಕಾಶ

ಪ್ರತಿದಿನ 100 ಭಕ್ತರಿಗೆ ಮಾತ್ರ ಸರ್ಪಸಂಸ್ಕಾರ ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ 25 ನಾಗಪ್ರತಿಷ್ಠೆ, 4 ಪಂಚಾಮೃತ ಮಹಾಭಿಷೇಕಕ್ಕೆ ಮಾತ್ರ ಅವಕಾಶವಿದೆ. ಪ್ರತಿ ದಿನ 4 ಪಾಳಿಯಲ್ಲಿ ಆಶ್ಲೇಷಾ ಬಲಿ ಸೇವೆ ನಡೆಯುತ್ತಿದ್ದು, ಒಂದು ಪಾಳಿಯಲ್ಲಿ 70 ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಸೇವೆಗೆ ಪ್ರತಿ ರಸೀದಿಯಿಂದ 2 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸ್ವಚ್ಚತೆಗೆ ಆದ್ಯತೆ

ದೇಗುಲ ಮತ್ತು ಷಣ್ಮುಖ ಪ್ರಸಾದ ಭೋಜನ ಶಾಲೆಯನ್ನು ಪ್ರತಿದಿನ ತೊಳೆದು ಸ್ವಚ್ಚ ಮಾಡಿ ವೈರಾಣು ತಡೆ ಔಷಧ ಸಿಂಪಡಿಸಲಾಗುತ್ತಿದೆ. ಭಕ್ತರಿಗೆ ಸೂಕ್ತ ಮಾಹಿತಿಗಳನ್ನು ನೀಡಲು ಅಲ್ಲಲ್ಲಿ ಸೂಚನಾ ಫ‌ಲಕವನ್ನು ಅಳವಡಿಸಲಾಗಿದೆ.

ದೇಗುಲದಲ್ಲಿ ಲಸಿಕೆ ಕೇಂದ್ರ ಶ್ರೀ ದೇಗುಲದ ರಾಜಗೋಪುರದ ಬಳಿ ಲಸಿಕಾ ಕೇಂದ್ರವಲ್ಲದೇ ಆರ್‌ಟಿಪಿಸಿಆರ್‌ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ. ಭಕ್ತರು ಮತ್ತು ಸಾರ್ವಜನಿಕರ ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ದೇಗುಲದ ಎಲ್ಲ ಸಿಬಂದಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದುಕೊಂಡಿದ್ದು, ಆಗಾಗ್ಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ತಿಳಿಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

33 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

3 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

4 hours ago