ಪುತ್ತೂರು, : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾಳಿಗೆ ಪುತ್ತೂರಿನ 5ನೇ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.
ಸುಬ್ರಹ್ಮಣ್ಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಹಿಂದು ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಾಮೀನು ಅರ್ಜಿಯನ್ನು ಪುತ್ತೂರು 5ನೇ ಜಿಲ್ಲಾಸತ್ರ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿದ್ದು, ಚೈತ್ರಾ ಸಹಿತ ಆಕೆಯ ತಂಡದ ಆರು ಮಂದಿ ಸದಸ್ಯರಿಗೆ ಜಾಮೀನು ಮಂಜೂರುಗೊಳಿಸಿದೆ.
ಸುಳ್ಯ ನ್ಯಾಯಾಲಯ ಚೈತ್ರ ಕುಂದಾಪುರ ಹಾಗೂ ಅವರ ತಂಡದವರಿಗೆ ಅವರಿಗೆ ನವೆಂಬರ್ 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ..3ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಆದರೆ ಚೈತ್ರಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಕಾರಣಕ್ಕೆ ಹಾಜರುಪಡಿಸಿರಲಿಲ್ಲ ಚೈತ್ರಾ ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಪ್ರಶ್ನಿಸಿದ ನ್ಯಾಯಾಧೀಶರು ನ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮತ್ತು ಜೈಲು ಅಧೀಕ್ಷಕರು ಹಾಗೂ ಚಿಕಿತ್ಸೆ ನೀಡಿದ ವೈದ್ಯಾಧಿಕಾರಿ ವಿವರ ನೀಡುವಂತೆ ಆದೇಶ ನೀಡಿದ್ದರು. ನ್ಯಾಯಾಲಯದ ವಿಚಾರಣೆಗೆ ಹಾಜರಾದ ಚೈತ್ರಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ಸುಳ್ಯ ನ್ಯಾಯಾಲಯ ವಿಧಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಜಿಲ್ಲಾ ನ್ಯಾಯಾಲಯದಲ್ಲಿ ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರಿಂದ, ಇದೀಗ ಪುತ್ತೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಚೈತ್ರಾ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…