Featured

ಕುಜದೋಷದ ಬಗ್ಗೆ ಮಾಹಿತಿ ಇಲ್ಲದವರು ಈ ಲೇಖನ ಓದಿ.

ಕುಜದೋಷದ ಬಗ್ಗೆ ಮಾಹಿತಿ ಇಲ್ಲದವರು ಈ ಲೇಖನ ಓದಿ.

ಕುಜದೋಷದ ಬಗ್ಗೆ ಮಾಹಿತಿ ನೀಡುವ ಅಗತ್ಯವು ಇಂದು ಎದ್ದು ಕಾಣುತ್ತಲಿದೆ.ಸರಿಯಾಗಿ ವಿಮರ್ಶಿಸದೆ ಮೇಲ್ನೋಟಕ್ಕೆ ಕಾಣುವ ಕುಜದೋಷವನ್ನು ಅರುಹಿ ಜನರನ್ನು ಭೀತಿಗೊಳಪಡಿಸುವ ಪ್ರವೃತ್ತಿ ಅಲ್ಲಲ್ಲಿ ಕಂಡುಬರುತ್ತಿದೆ.

ಕನ್ಯಾ-ವರರ ಜಾತಕ ಹೊಂದಾಣಿಕೆಯಲ್ಲಿ ಕುಜದೋಷವನ್ನು ಪರಿಶೀಲಿಸುವುದು ಸಂಪ್ರದಾಯ.ಜನ್ಮ ಕುಂಡಲಿಯಲ್ಲಿ ಲಗ್ನ,ಶುಕ್ರ, ಚಂದ್ರ ಸ್ಥಿತ ಸ್ಥಾನಗಳಿಂದ ೧,೨,೪,೫,೭,೮,೧೨ ನೇ ಸ್ಥಾನಗಳಲ್ಲಿ ಕುಜನು ಇದ್ದರೆ ಕುಜ ದೋಷ ಇದೆ ಎಂಬುದಾಗಿ ಮೇಲ್ನೋಟದ ತೀರ್ಮಾನಕ್ಕೆ ಬರುವುದು ಬಹುತೇಕ ಅನುಸರಿಸುವ ಕ್ರಮ .ಆದರೆ ಈ ರೀತಿಯಾಗಿ ತೀರ್ಮಾನಕ್ಕೆ ಬಂದರೂ ಅಂತಹಾ ದೋಷಗಳಿಗೆ ಅಪವಾದಗಳು ಕೂಡಾ ಇವೆ ಅಂದರೆ ಪರಿಹಾರಗಳೂ ಇವೆ ಎಂಬುದನ್ನು ಗಮನಿಸುವುದು ಅಗತ್ಯ ಇದೆ.ಕುಜದೋಷಕ್ಕೆ ೨೨ ರೀತಿಯಲ್ಲಿ ಅಪವಾದಗಳು ಇವೆ.ಆ ೨೨ ರೀತಿಯ ಪರಿಹಾರಗಳನ್ನು ಕುಂಡಲಿಯಲ್ಲಿಯೇ ಪರಿಶೀಲಿಸಬೇಕಾಗಿದೆ. ಅವುಗಳನ್ನು ಅನ್ವಯಿಸಿ ಪರಿಶೀಲನೆ ಮಾಡಿದಾಗ ಹೆಚ್ಚಿನ ಜಾತಕಗಳಲ್ಲಿ ಕುಜ ದೋಷ ಜಾತಕದಲ್ಲಿಯೇ ಪರಿಹಾರ ಆಗಿರುತ್ತದೆ.ಆ ಬಗ್ಗೆ ವಿವರಿಸುವುದು ಈ ಬರಹದ ಗುರಿ.

.[೧] ಕರ್ಕಾಟಕ ಮತ್ತು ಸಿಂಹ ಲಗ್ನ ಸಂಜಾತರಿಗೆ ಕುಜದೋಷ ಇಲ್ಲ.

[೨] ೭ ನೇ ರಾಶಿಯಲ್ಲಿರುವ ಕುಜನನ್ನು ಗುರು ನೋಡಿದಲ್ಲಿ ದೋಷ ಪರಿಹಾರ.

[೩] ಕನ್ಯಾ ಜಾತಕದಲ್ಲಿ ಜನ್ಮ ಲಗ್ನದಿಂದ ೭ ನೇ ರಾಶಿಯಲ್ಲಿ ಆ ರಾಶಿಯ ಅಧಿಪತಿ ಅಥವಾ ಯಾವುದಾದರೂ ಶುಭ ಗ್ರಹ ಇದ್ದರೆ ಸಂತಾನ ದೋಷ, ವೈಧವ್ಯ ದೋಷ, ಕುಜ ದೋಷ ಪರಿಹಾರ.

[೪] ೭ ನೇ ಸ್ಥಾನದ ಅಧಿಪತಿ ೭ ನೇ ಮನೆಯಲ್ಲಿ ಇದ್ದರೆ ಕುಜ ದೋಷ ಇಲ್ಲ.

[೫] ಕನ್ಯಾ- ವರರ ಜಾತಕಗಳಲ್ಲಿ ಸಮಾನವಾದ ಕುಜ ದೋಶ ಇದ್ದಲ್ಲಿ ಅಥವಾ ಕುಜದೋಶಕ್ಕೆ ಸಮಾನವಾದ ಪಾಪ ಗ್ರಹ ದೋಷ ಇದ್ದಲ್ಲಿ[ರವಿ,ಶನಿ,ಕೇತು,ರಾಹು, ಕುಜ-ಇವುಗಳು ಪಾಪ ಗ್ರಹರು]ಕುಜ ದೋಷ ಪರಿಹಾರ.

[೬]ಜನ್ಮ ಲಗ್ನದಿಂದ ೧,೪,೭,೮,೧೨ರಲ್ಲಿ ಶನಿ ಇದ್ದರೆ ಕುಜ ದೋಷ ಪರಿಹಾರ.

[೭]ಕನ್ಯಾ-ವರರ ಜಾತಕಗಳಲ್ಲಿ ಒಂದರಲ್ಲಿ ಕುಜದೋಶ ಇದ್ದು ಮತ್ತೊಂದರಲ್ಲಿ ೧,೪,೭,೮,೧೨ರಲ್ಲಿ ಶನಿ ಇದ್ದರೆ ಕುಜ ದೋಷ ಪರಿಹಾರ.

[೮]ಲಗ್ನದಿಂದ೨,೪,೭,೮,೧೨ರಲ್ಲಿರುವ ಕುಜನು ಗುರುವಿನೊಟ್ಟಿಗೆ ಇದ್ದರೆ ಅಥವಾ ಬುಧ,ಗುರು ಗಳಿಂದ ನೋಡಲ್ಪಟ್ಟರೆ ಕುಜದೋಷ ಪರಿಹಾರ.

[೯]ಕುಜನು ಗುರು ಅಥವಾ ಚಂದ್ರನ ಒಟ್ಟಿಗೆ ಇದ್ದರೆ ಅಥವಾ ಅವರಿಂದ ನೋಡಲ್ಪಟ್ಟರೆ ಕುಜ ದೋಷ ಪರಿಹಾರ.

[೧೦]ಮೇಷ,ವೃಶ್ಚಿಕ,ಮಕರ,ಕರ್ಕಟಕ,ಸಿಂಹ,ಧನುಸ್ಸು,ಮೀನ ಈ ರಾಶಿಗಳಲ್ಲಿ ಕುಜ ಇದ್ದರೆ ಕುಜ ದೋಷ ಇಲ್ಲ.

[೧೧]ಕುಜನು, ರವಿ, ಚಂದ್ರ,ಗುರು ನವಾಂಶದಲ್ಲಿ ಇದ್ದರೆ ಕುಜದೋಷ ಇಲ್ಲ.

[೧೨]ಕುಜನು ಕರ್ಕಾಟಕ,ಮಿಥುನ,ಕನ್ಯಾ ರಾಶಿಗಳಲ್ಲಿ ಇದ್ದರೆ ಅಥವಾ ಅಸ್ತನಾಗಿ ಇದ್ದರೆ ಶುಭಾಶುಭ ಫಲ ಇಲ್ಲವಾದ ಕಾರಣ ಕುಜ ದೋಷ ಇಲ್ಲ.

[೧೩]ಕನ್ಯಾ-ವರರ ಜಾತಕಗಳಲ್ಲಿ ಒಂದರಲ್ಲಿ ಕುಜ ದೋಷವಿದ್ದು ಮತ್ತೊಂದರಲ್ಲಿ ಅದೆ ರಾಶಿಯಲ್ಲಿ ಶನಿ,ಕುಜ,ಅಥವಾ ಯಾವುದಾದರೂ ಪಾಪಗ್ರಹ ಇದ್ದಲ್ಲಿ ಕುಜ ದೋಷ ಇಲ್ಲ.

[೧೪]ಜಾತಕದಲ್ಲಿ ಯಾವ ರಾಶಿಯಲ್ಲಿ ಕುಜನು ಇದ್ದಾನೋ ಆ ರಾಶಿಯ ಅಧಿಪತಿ ೧,೪,೭,೧೦,೫,೯ರಲ್ಲಿ ಇದ್ದರೆ ಕುಜ ದೋಷ ಪರಿಹಾರ.

[೧೫]ಮೇಷ ಲಗ್ನವಾಗಿ ಅಲ್ಲಿ ಕುಜನು ಇದ್ದರೆ,ಮಕರ ಲಗ್ನವಾಗಿ ಧನು ರಾಶಿಯಲ್ಲಿ ಕುಜನು ಇದ್ದರೆ,ಸಿಂಹ ಲಗ್ನವಾಗಿ ವೃಶ್ಚಿಕದಲ್ಲಿ ಕುಜನು ಇದ್ದರೆ,ಕರ್ಕಾಟಕ ಲಗ್ನವಾಗಿ ಮಕರದಲ್ಲಿ ಕುಜನು ಇದ್ದರೆ, ಧನುರ್ಲಗ್ನವಾಗಿ ಕರ್ಕಾಟಕದಲ್ಲಿ ಕುಜನು ಇದ್ದರೆ ಆಯಾಲಗ್ನದಲ್ಲಿ ಹುಟ್ಟಿದವರಿಗೆ ಕುಜ ದೋಷ ಇಲ್ಲ.

.[೧೬]ಅಶ್ವಿನಿ,ಮೃಗಶಿರೆ,ಪುನರ್ವಸು,ಪುಷ್ಯ,ಆಶ್ಲೇಶಾ,ಉತ್ತರಾ,ಸ್ವಾತಿ,ಅನುರಾಧ,ಪೂರ್ವಾಷಾಢ, ಉತ್ತರಾಷಾಢ,ಶ್ರವಣ,ಉತ್ತರಾಭಾದ್ರ,ರೇವತಿ–ಈ ನಕ್ಷತ್ರದವರಿಗೆ ಕುಜದೋಷ ಇಲ್ಲ.

[೧೭]ಮಿಥುನ-ಕನ್ಯಾ ಲಗ್ನಗಳಲ್ಲಿ ಹುಟ್ಟಿದವರಿಗೆ ಕರ್ಕಟಕ-ತುಲಾ ರಾಶಿಗಳಲ್ಲಿ ಕುಜನು ಇದ್ದರೆ,ವೃಷಭ-ಸಿಂಹ ಲಗ್ನದವರಿಗೆ ಮಿಥುನ- ಕನ್ಯಾ ರಾಶಿಗಳಲ್ಲಿ ಕುಜನು ಇದ್ದರೆ ದೋಷ ಇಲ್ಲ.

[೧೮]ಮೇಷ-ವೃಶ್ಚಿಕ ಲಗ್ನದವರಿಗೆ ಕರ್ಕಟಕ- ಕುಂಭ ರಾಶಿಗಳಲ್ಲಿ, ಮಕರ- ಸಿಂಹ ಲಗ್ನದವರಿಗೆ ಮೇಷ- ವೃಶ್ಚಿಕ ರಾಶಿಗಳಲ್ಲಿ ಕುಜನು ಇದ್ದರೆ ಕುಜ ದೋಷ ಇಲ್ಲ.

[೧೯]ಮಕರ-ಕರ್ಕಟಕ ಲಗ್ನದವರಿಗೆ ಕರ್ಕಟಕ-ಮಕರ ರಾಶಿಗಳಲ್ಲಿ ಕುಜನು ಇದ್ದರೆ ಕುಜ ದೋಷ ಇಲ್ಲ ಮತ್ತು ಕರ್ಕಟಕ-ಮಕರ ಲಗ್ನದವರಿಗೆ ಮಕರ-ಕರ್ಕಟಕ ರಾಶಿಗಳಲ್ಲಿ ಕುಜನು ಇದ್ದರೆ ದೋಷ ಇಲ್ಲ.

[೨೦]ಧನು-ಮೀನ ಲಗ್ನದವರಿಗೆ ಕರ್ಕಟಕ-ತುಲಾರಾಶಿಗಳಲ್ಲಿ,ವೃಷಭ-ಸಿಂಹ ಲಗ್ನದವರಿಗೆ ಧನು-ಮೀನ ರಾಶಿಗಳಲ್ಲಿ ಕುಜನು ಇದ್ದರೆ ದೋಷ ಇಲ್ಲ.

[೨೧]ವೃಷಭ-ತುಲಾ ಲಗ್ನದವರಿಗೆ ಮೇಷ-ಕನ್ಯಾ ರಾಶಿಗಳಲ್ಲಿ,ವೃಶ್ಚಿಕ-ಮಿಥುನ ಲಗ್ನದವರಿಗೆ ವೃಷಭ- ತುಲಾ ರಾಶಿಗಳಲ್ಲಿ ಕುಜನು ಇದ್ದರೆ ದೋಷ ಇಲ್ಲ.

[೨೨]ಕುಂಭ-ಸಿಂಹ ಲಗ್ನದವರಿಗೆ ಕುಜನು ಯಾವರಾಶಿಯಲ್ಲಿ ಇದ್ದರೂ ದೋಷ ಇಲ್ಲ. ಕುಂಭ-ಸಿಂಹ ರಾಶಿಗಳು ಲಗ್ನದಿಂದ ೧-೨-೪-೫-೭-೮-೧೨ ನೇ ರಾಶಿಗಳಾಗಿದ್ದು ಅಲ್ಲಿ ಕುಜನು ಇದ್ದರೆ ಕುಜ ದೋಷ ಇಲ್ಲ.

ಈ ರೀತಿಯಾಗಿ ಕುಜದೋಷಗಳಿಗೆ ಅಪವಾದ ಅಥವಾ ಪರಿಹಾರಗಳನ್ನು ಶಾಸ್ತ್ರಕಾರರು ತಿಳಿಸಿರುವ ಕಾರಣ ಕೆಲವೇ ಕೆಲವು ಜಾತಕಗಳಲ್ಲಿ ಮಾತ್ರಾ ಕುಜ ದೋಷ ಇರಬಹುದಾಗಿದೆ. (ಈ ವಿಚಾರವನ್ನು ಜ್ಯೋತಿಷಿಗಳು ಗಮನದಲ್ಲಿರಿಸಿಕೊಂಡು ಕುಜದೋಷದ ಬಗ್ಗೆ ಪರಿಶೀಲಿಸ ಬೇಕೆಂಬುದು ಶಾಸ್ತ್ರಕಾರರ ಮತ.)

ಸಂಗ್ರಹ : ಪಂಡಿತ್ ಗಣಪತಿ ಭಟ್ 8088827292.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago