ಹುಬ್ಬಳ್ಳಿ: ಆರ್ಎಸ್ಎಸ್ ಸಂಘ ಏನು ಮಾಡುತ್ತಿದೆ, ದೇಶಕ್ಕೆ ಅದರ ಸೇವೆ ಏನೆಂಬುದು ತಿಳಿಯಲು ಎಚ್.ಡಿ.ಕುಮಾರಸ್ವಾಮಿ ಅವರು ಸಂಘ ಶಾಖೆಗೆ ಬಂದು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್ಎಸ್ಎಸ್ ರಾಷ್ಟ್ರ ಕಟ್ಟುವ, ಸೇವೆ ಸಲ್ಲಿಸುವ ಕಾಯಕದಲ್ಲಿ ತೊಡಗಿದ್ದು, ದೇಶದಲ್ಲಿ ಅಷ್ಟೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ತನ್ನ ಕಾರ್ಯಕ್ಷೇತ್ರ ಹೊಂದಿದೆ ಎಂಬುದನ್ನು ಕುಮಾರಸ್ವಾಮಿ ತಿಳಿದುಕೊಳ್ಳಲಿ. ಕುಟುಂಬ ರಾಜಕಾರಣಕ್ಜೆ ಜೋತು ಬಿದ್ದಿರುವ ಕುಮಾರಸ್ವಾಮಿ ಅವರಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತಿದೆ” ಎಂದರು.
ಇನ್ನು “ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು ಎಲ್ಲರೂ ಕೂಡ ಬೇಲ್ ಮೇಲೆ ಇದ್ದಾರೆ. ರಾಹುಲ್ ಗಾಂಧಿ ಮಾದಕದ್ರವ್ಯ ವ್ಯಸನಿ ಎಂಬುದನ್ನು ಮಾಧ್ಯಮಗಳು ಹೇಳಿದ್ದು, ಇನ್ನೊಂದು ಕಡೆ ಮೆಚ್ಚುವ ರೀತಿ ಆಡಳಿತ ನೀಡುತ್ತಿರುವ ಪ್ರಧಾನಿ ಮೋದಿಯವರ ಬಗ್ಗೆ ಜನಮನ್ನಣೆ ಹೆಚ್ಚುತ್ತಿದೆ. ಮೋದಿಯವರು ಸಬ್ ಕಾ ಸಥ್ ಸಬ್ ಕಾ ವಿಕಾಸ ಎಂದರೆ, ಮುಸ್ಲಿಮರ ಅಭಿವೃದ್ಧಿಯೊಂದೇ ಎಂಬಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…