ಕಾಪು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶ್ರುತಿ ಕುಟುಂಬ ಸಮೇತರಾಗಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ದ ದೇಗುಲಗಳಿಗೆ ಭೇಟಿ ನೀಡಿದರು.
ಈ ಸಂದರ್ಭ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ಕೊರಂಗ್ರಪಾಡಿ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನಾನು ಇಲ್ಲಿನ ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುವುದಿತ್ತು, ಜೊತೆಗೆ ಇಲ್ಲಿನ ಕಾಪು ಮಾರಿಯಮ್ಮ ದೇವಸ್ಥಾನದ ಬಗ್ಗೆ ಕೇಳಿದ್ದೆ, ದೇಗುಲ ಬಹಳ ಸುಂದರವಾಗಿ ಮೂಡಿ ಬಂದಿದೆ, ಕರಾವಳಿ ಭಾಗಕ್ಕೆ ಭೇಟಿ ನೀಡುವ ಯಾತ್ರಿಗಳು, ಪ್ರವಾಸಿಗರು ಇಲ್ಲಿಗೆ ಒಮ್ಮೆಯಾದರೂ ಭೇಟಿ ನೀಡಿ ಎಂದರು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…