ಹೈದರಾಬಾದ್: ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ನಲ್ಲಿರುವ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ (ಆ.8ರಂದು) ಹೈದರಾಬಾದ್ನಲ್ಲಿರುವ ನಾಗಚೈತನ್ಯ ಅವರ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಎಂಗೇಜ್ ಮೆಂಟ್ ಬಳಿಕ ನಾಗಾರ್ಜುನ್ ಫೋಟೋಗಳನ್ನು ಹಂಚಿಕೊಂಡು ಶುಭಕೋರಿದ್ದಾರೆ.
“ನಮ್ಮ ಮಗ ನಾಗ ಚೈತನ್ಯ ಶೋಭಿತಾ ಧೂಳಿಪಾಲ ಅವರ ನಿಶ್ಚಿತಾರ್ಥ ಇಂದು ಬೆಳಿಗ್ಗೆ 9:42ಕ್ಕೆ ನೆರವೇರಿದೆ. ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಘೋಷಿಸಲು ತುಂಬಾ ಸಂತೋಷವಾಗುತ್ತಿದೆ. ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ದಂಪತಿಗಳಿಗೆ ಅಭಿನಂದನೆಗಳು! ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ!” ಎಂದು ‘ಎಕ್ಸ್ʼನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಶೋಭಿತಾ ರೇಷ್ಮೆ ಸೀರೆ ಮತ್ತು ಸಾಂಪ್ರದಾಯಿಕ ಚಿನ್ನದ ಆಭರಣಗಳನ್ನಯ ತೊಟ್ಟು ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ನಾಗಚೈತನ್ಯ ಬಿಳಿ ಡ್ರೆಸ್ ನಲ್ಲಿ ರಾಯಲ್ ಆಗಿ ಕಾಣಿಸಿಕೊಂಡಿದ್ದಾರೆ.
ಅಭಿಮಾನಿಗಳು ಹಾಗೂ ಗೆಳೆಯರು ಇಬ್ಬರಿಗೆ ಶುಭ ಹಾರೈಸಿದ್ದಾರೆ.ನಾಗಾರ್ಜುನ ಅವರ ಪತ್ನಿ ಅಮಲಾ ಅಕ್ಕಿನೇನಿ ಮತ್ತು ಚೈತನ್ಯ ಅವರ ಸಹೋದರ ಅಖಿಲ್ ಅವರು ಧೂಳಿಪಾಲ ಅವರ ಪೋಷಕರ ಸಮ್ಮುಖದಲ್ಲಿ ನಿಶ್ಚಿತಾರ್ಥ ಸಮಾರಂಭದಲ್ಲಿ ನೆರವೇರಿದೆ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…