ಮಂಗಳೂರು: ಕಟ್ಟಡ ಕಾರ್ಮಿಕರ ಪರವಾಗಿ ಧೃಢವಾಗಿ ನಿಂತ ದಕ್ಷ ಅಧಿಕಾರಿಣಿ ಶ್ರೀಮತಿ ರೋಹಿಣಿ ಸಿಂಧೂರಿಯವರನ್ನು ಏಕಾಏಕಿ ವರ್ಗಾವಣೆ ಮಾಡಿದ ರಾಜ್ಯ ಸರಕಾರದ ಕುತಂತ್ರವನ್ನು ಖಂಡಿಸಿ ಸಿಐಟಿಯು ನೇತ್ರತ್ವದಲ್ಲಿ ನಗರದಲ್ಲಿಂದು ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ” ಕಟ್ಟಡ ಕಾರ್ಮಿಕರ ನೊಂದಾವಣೆ ಶುಲ್ಕ ಹಾಗೂ ಸೆಸ್ ಮೂಲಕ ಸಂಗ್ರಹ ವಾಗುತ್ತಿರುವ ಕೋಟ್ಯಾಂತರ ರೂಪಾಯಿ ಹಣವಿರುವ ಇಲಾಖೆಗೆ ಇಷ್ಟವರೆಗೆ ಪ್ರಮುಖ ಅಧಿಕಾರಿಯೊಬ್ಬರನ್ನು ನೇಮಕ ಮಾಡದಿರುವ ಸರಕಾರದ ಕ್ರಮವೇ ಸಂಶಯಾಸ್ಪದವಾಗಿದೆ. ಕಳೆದ 5 ತಿಂಗಳ ಹಿಂದೆ ಕಾರ್ಯದರ್ಶಿ ಯಾಗಿ ನೇಮಕಗೊಂಡ ಶ್ರೀಮತಿ ರೋಹಿಣಿ ಸಿಂಧೂರಿಯವರು ಕಟ್ಟಡ ಕಾರ್ಮಿಕರ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿರುತ್ತಾರೆ.ಕಟ್ಟಡ ಕಾರ್ಮಿಕರಿಗಾಗಿ ಮೀಸಲಿರಿಸಿದ ಹಣವನ್ನು ತನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಅನ್ಯ ಕೆಲಸಗಳಿಗೆ ಉಪಯೋಗಿಸಲು ಬಿಡಲಾರೆ ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ ವಾಗಿದೆ” ಎಂದು ಹೇಳಿದರು
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ,ಜಯಂತಿ ಶೆಟ್ಟಿ,ದಿನೇಶ್ ಶೆಟ್ಟಿ,ಇತರ ಸಂಘಟನೆಗಳ ನಾಯಕರಾದ ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಭಾರತಿ ಬೋಳಾರ,ತಿಮ್ಮಯ್ಯ ಕೊಂಚಾಡಿ,ಕ್ರಷ್ಣಪ್ಪ ಕೊಂಚಾಡಿ ಮುಂತಾದವರು ಹಾಜರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…