Featured

ಕುತಂತ್ರದಿಂದ ಅಧಿಕಾರದ ಗದ್ದುಗೆಯೇರಿದ ಬಿಜೆಪಿ, ರಾಜ್ಯವನ್ನು ಅದೋಗತಿಗೆ ತಂದು ನಿಲ್ಲಿಸಿದೆ : ಸುನಿಲ್ ಕುಮಾರ್ ಬಜಾಲ್ -Vishwanews24

ಮಂಗಳೂರು: ಕಟ್ಟಡ ಕಾರ್ಮಿಕರ ಪರವಾಗಿ ಧೃಢವಾಗಿ ನಿಂತ ದಕ್ಷ ಅಧಿಕಾರಿಣಿ ಶ್ರೀಮತಿ ರೋಹಿಣಿ ಸಿಂಧೂರಿಯವರನ್ನು ಏಕಾಏಕಿ ವರ್ಗಾವಣೆ ಮಾಡಿದ ರಾಜ್ಯ ಸರಕಾರದ ಕುತಂತ್ರವನ್ನು ಖಂಡಿಸಿ ಸಿಐಟಿಯು ನೇತ್ರತ್ವದಲ್ಲಿ ನಗರದಲ್ಲಿಂದು ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ , ” ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ, ಕುತಂತ್ರದಿಂದ ಅಧಿಕಾರದ ಗದ್ದುಗೆಯೇರಿದ ಬಿಜೆಪಿ, ರಾಜ್ಯವನ್ನು ಅದೋಗತಿಗೆ ತಂದು ನಿಲ್ಲಿಸಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭಾರೀ ಪ್ರವಾಹದಿಂದ ಲಕ್ಷಾಂತರ ಜನತೆ ಮನೆಮಠಗಳನ್ನು ಕಳೆದುಕೊಂಡರೂ, ಕೋಟ್ಯಾಂತರ ರೂಪಾಯಿಯ ಆಸ್ತಿಪಾಸ್ತಿ ಹಾನಿಗೊಂಡರೂ ರಾಜ್ಯ ಸರಕಾರ ಕಿಂಚಿತ್ತೂ ಸ್ಪಂದಿಸಿಲ್ಲ.
ರಾಜ್ಯದಿಂದ 25 ಮಂದಿ ಸಂಸದರು ಬಿಜೆಪಿಯಿಂದದ ಆಯ್ಕೆಯಾಗಿ ಹೋಗಿದ್ದರೂ ಕೇಂದ್ರ ಸರಕಾರವೂ ಕೂಡ ಎಳ್ಳಷ್ಟೂ ಸ್ಪಂದಿಸಿಲ್ಲ. ಈತನ್ಮಧ್ಯೆ ರಾಜ್ಯ ಸರ್ಕಾರವು 37 ಇಲಾಖೆಗಳಿಗೆ ನೋಟೀಸ್ ಜಾರಿ ಮಾಡಿ ಅಲ್ಲಿದ್ದ ಹಣವನ್ನು ನೆರೆ ಪರಿಹಾರಕ್ಕೆ ನೀಡಬೇಕೆಂದು ಒತ್ರಾಯಿಸುತ್ತಿರುವುದು ರಾಜ್ಯ ಅನುಭವಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಹಿಡಿದ ಕೈಗನ್ನಡಿಯಾಗಿದೆ.ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿರಿಸಿದ ಸುಮಾರು 9,000 ಕೋಟಿ ರೂಪಾಯಿ ಹಣದ ಮೇಲೆ ಪ್ರತಿಯೊಬ್ಬರ ಕಣ್ಣು ಬಿದ್ದಿದ್ದು,ಅದನ್ನು ನುಂಗಿ ನೀರು ಕುಡಿಯಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ.
ಕಟ್ಟಡ ಕಾರ್ಮಿಕರ ಮೀಸಲು ನಿಧಿಯನ್ನು ಇತರೆ ಕಾರಣಕ್ಕೆ ಬಳಸಬಾರದೆಂಬ ಸುಪ್ರೀಂ ಕೋರ್ಟ್ ನ ಆದೇಶವನ್ನು ಉಲ್ಲಂಘಿಸಿರುವುದು ಮಾತ್ರವಲ್ಲ,ಅದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ರೋಹಿಣಿ ಸಿಂಧೂರಿಯವರನ್ನು ಏಕಾಏಕಿ ವರ್ಗಾವಣೆಗೊಳಿಸಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಹೇಳಿದರು.

ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ” ಕಟ್ಟಡ ಕಾರ್ಮಿಕರ ನೊಂದಾವಣೆ ಶುಲ್ಕ ಹಾಗೂ ಸೆಸ್ ಮೂಲಕ ಸಂಗ್ರಹ ವಾಗುತ್ತಿರುವ ಕೋಟ್ಯಾಂತರ ರೂಪಾಯಿ ಹಣವಿರುವ ಇಲಾಖೆಗೆ ಇಷ್ಟವರೆಗೆ ಪ್ರಮುಖ ಅಧಿಕಾರಿಯೊಬ್ಬರನ್ನು ನೇಮಕ ಮಾಡದಿರುವ ಸರಕಾರದ ಕ್ರಮವೇ ಸಂಶಯಾಸ್ಪದವಾಗಿದೆ. ಕಳೆದ 5 ತಿಂಗಳ ಹಿಂದೆ ಕಾರ್ಯದರ್ಶಿ ಯಾಗಿ ನೇಮಕಗೊಂಡ ಶ್ರೀಮತಿ ರೋಹಿಣಿ ಸಿಂಧೂರಿಯವರು ಕಟ್ಟಡ ಕಾರ್ಮಿಕರ ಏಳಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿರುತ್ತಾರೆ.ಕಟ್ಟಡ ಕಾರ್ಮಿಕರಿಗಾಗಿ ಮೀಸಲಿರಿಸಿದ ಹಣವನ್ನು ತನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಕಾರಣಕ್ಕೂ ಅನ್ಯ ಕೆಲಸಗಳಿಗೆ ಉಪಯೋಗಿಸಲು ಬಿಡಲಾರೆ ಎಂದು ಹೇಳಿರುವುದು ನಿಜಕ್ಕೂ ಶ್ಲಾಘನೀಯ ವಾಗಿದೆ” ಎಂದು ಹೇಳಿದರು

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಜೆ.ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ,ಜಯಂತಿ ಶೆಟ್ಟಿ,ದಿನೇಶ್ ಶೆಟ್ಟಿ,ಇತರ ಸಂಘಟನೆಗಳ ನಾಯಕರಾದ ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಭಾರತಿ ಬೋಳಾರ,ತಿಮ್ಮಯ್ಯ ಕೊಂಚಾಡಿ,ಕ್ರಷ್ಣಪ್ಪ ಕೊಂಚಾಡಿ ಮುಂತಾದವರು ಹಾಜರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago