Featured

ಕುತ್ಯಾರು : ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ. ಅನುದಾನ – ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದ  ಶಾಸಕ ಲಾಲಾಜಿ ಆರ್ ಮೆಂಡನ್ – Vishwanews24

ಕುತ್ಯಾರು : ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ. ಅನುದಾನ – ಗುದ್ದಲಿ ಪೂಜೆ ಉದ್ಘಾಟನೆ ನೆರವೇರಿಸಿದ  ಶಾಸಕ ಲಾಲಾಜಿ ಆರ್ ಮೆಂಡನ್

ಕುತ್ಯಾರು : ಕಾಪು ತಾಲೂಕಿನ ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಲ್ಲಿ ಸುಮಾರು 19 ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 3 ಕಾಮಗಾರಿಗಳಿಗೆ ಉದ್ಘಾಟನೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬಿಜೆಪಿ ನೇತೃತ್ವದ ಕುತ್ಯಾರು ಗ್ರಾಮ ಪಂಚಾಯತ್ ಉತ್ತಮವಾಗಿ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದು ಜನಪ್ರತಿನಿಧಿಗಳು ಜನರೊಂದಿಗೆ ನಿಕಟಸಂಪರ್ಕ ಹೊಂದಿದ್ದು ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಈಗಾಗಲೇ 5.33 ಕೋಟಿ ಅನುದಾನ ಹಾಗೂ ಈ ಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುತ್ಯಾರು ಇದರ ನೂತನ ಕಟ್ಟಡ ನಿರ್ಮಾಣಕ್ಕೆ 18 ಕೋಟಿ ರೂಗಳನ್ನು ಒದಗಿಸಲಾಗಿದೆ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಬಂಟ್ವಾಳ: ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು ; ಮನೆಗೆ ತೀವ್ರ ಹಾನಿ – Vishwanews24

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶಿಲ್ಪಾ ಜಿ ಸುವರ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರು ಲತಾ ಎಸ್ ಆಚಾರ್ಯ, ಉಪಾಧ್ಯಕ್ಷರು ರಾಜಾ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಜನಿ ಭಟ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಶಿಪ್ರಭಾ, ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ ಆಚಾರ್ಯ, ಗಣೇಶ್ ಶೆಟ್ಟಿ ಪಯ್ಯರು, ಸಂಪತ್ ಪೂಜಾರಿ, ಶೈಲೇಶ್, ದಿವ್ಯ ಶೆಟ್ಟಿಗಾರ್, ಭಾರತಿ, ಎವುಜಿನ್ ಲೋಬೊ, ಅಗ್ನೇಯಸ್ ಮಥಯಸ್, ಸ್ಥಳೀಯ ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ಪ್ರಸಾದ್ ಶೆಟ್ಟಿ ಕುತ್ಯಾರು, ಧೀರಜ್ ಶೆಟ್ಟಿ, ನವೀನ್ ಶೆಟ್ಟಿ, ವೈ. ಎಸ್ ಭಂಡಾರಿ, ಅಶೋಕ್ ರಾವ್, ಶ್ರೀಕರ ಮಾಸ್ಟರ್, ಪ್ರದೀಪ್ ರಾವ್, ಸದಾಶಿವ ಆಚಾರ್ಯ, ಸುರೇಶ್, ಹರೀಶ್ ಆಚಾರ್ಯ, ರಾಘವೇಂದ್ರ ಹಾಗೂ ಸ್ಥಳೀಯರು, ಗುತ್ತಿಗೆದಾರರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಕಳ : ಹಿಂದೂ ಜಾಗರಣ ವೇದಿಕೆಯ ವತಿಯಿಂದ ನಟ ಚೇತನ್ ವಿರುದ್ಧ ದೂರು ದಾಖಲು – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago