ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನಿದೆ. ಆದರೆ ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕುದ್ರೋಳಿ ಕಸಾಯಿಖಾನೆ ಮುಚ್ಚಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುದ್ರೋಳಿ ಕಸಾಯಿಖಾನೆಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಹತ್ಯೆ ಮಾಡಲಾಗುತ್ತಿದೆ. ಅಲ್ಲಿ ನಿರಂತರ ಗೋಹತ್ಯೆ ನಡೆಯುತ್ತಿದೆ. ಪ್ರತಿ ತಿಂಗಳು 350-400 ಜಾನುವಾರುಗಳ ಹತ್ಯೆ ನಡೆಯುತ್ತಿದ್ದು, ಈ ದಾಖಲೆಗಳು ಮಾಹಿತಿ ಹಕ್ಕಿನಿಂದ ಪಡೆದ ಮಾಹಿತಿಯಿಂದಲೇ ಬಹಿರಂಗವಾಗಿದೆ ಎಂದು ಅವರು ತಿಳಿಸಿದರು.
ಈ ಕುರಿತು ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಏನು ಪ್ರಯೋಜನವಾಗಿಲ್ಲ. ಪೊಲೀಸರು ಈವರೆಗೂ ಪ್ರಕರಣ ಕೂಡ ದಾಖಲಿಸಿಕೊಂಡಿಲ್ಲ. ಪ್ರಕರಣ ದಾಖಲಿಸದಂತೆ ಪೊಲೀಸರಿಗೆ ಮೇಲಿನಿಂದ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.
ಮಾಹಿತಿಯಂತೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕಳೆದ 6 ತಿಂಗಳಲ್ಲಿ 1,800 ಜಾನುವಾರುಗಳ ಹತ್ಯೆ ನಡೆದಿದೆ. ಜಿಲ್ಲೆಯಲ್ಲಿ ಅನಧಿಕೃತ ಬೀಫ್ ಸ್ಟಾಲ್ ಗಳು ಕಾರ್ಯಾಚರಿಸುತ್ತಿವೆ. ತಕ್ಷಣ ಸರಕಾರ ಇದರ ವಿರುದ್ಧ ಕ್ರಮಕೈಗೊಳ್ಳಬೇಕು. ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆಯನ್ನು ರದ್ದುಗೊಳಿಸಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಿವಾನಂದ ಮೆಂಡನ್, ಪ್ರದೀಪ್ ಪಂಪ್ವೆಲ್, ಪ್ರವೀಣ್ ಕುತ್ತಾರ್ ಹಾಗೂ ಭುಜಂಗ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…